Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು - ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ತಗ್ಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬದನ್ನು ತಿಳಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಐದು ಜನರು ಹೊರಟರು. ಅವರು ಲಯಿಷ್ ನಗರಕ್ಕೆ ಬಂದರು. ಅಲ್ಲಿಯ ಜನರು ಸುರಕ್ಷಿತವಾಗಿರುವುದನ್ನು ಅವರು ನೋಡಿದರು. ಚೀದೋನ್ಯರು ಅವರನ್ನು ಆಳುತ್ತಿದ್ದರು. ಎಲ್ಲವೂ ಶಾಂತವಾಗಿತ್ತು; ಸಮಾಧಾನಕರವಾಗಿತ್ತು; ಸುಖಕರವಾಗಿತ್ತು. ಸಮೀಪದಲ್ಲಿ ಅವರನ್ನು ಪೀಡಿಸುವ ಶತ್ರುಗಳು ಇರಲಿಲ್ಲ. ಅವರು ಚೀದೋನ್ ನಗರದಿಂದ ಬಹಳ ದೂರ ಇದ್ದರು. ಅವರು ಆರಾಮಿನ ಜನರೊಡನೆ ಯಾವ ಒಪ್ಪಂದವನ್ನೂ ಇಟ್ಟುಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:7
13 ತಿಳಿವುಗಳ ಹೋಲಿಕೆ  

ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿ ಆ ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸಿಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರಿಟ್ಟರು.


ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.


ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವುದೇ ಹೊರತು ಒಳ್ಳೆಕೆಲಸ ಮಾಡುವವನಿಗೆ ಭಯವೇನೂ ಇರುವುದಿಲ್ಲ. ನೀನು ಅಧಿಕಾರಿಗೆ ಭಯಪಡದೇ ಇರಬೇಕೆಂದು ಅಪೇಕ್ಷಿಸುತ್ತೀಯೋ ಒಳ್ಳೆಯದನ್ನು ಮಾಡು. ಆಗ ಆ ಅಧಿಕಾರಿಯೇ ನಿನ್ನನ್ನು ಹೊಗಳುವನು.


ಅವನ ತಂದೆಯಾದ ದಾವೀದನು, “ನೀನು ಹೀಗೆ ಮಾಡಿದ್ದೇಕೆ” ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.


ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.


ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು


ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ದೇಶವು ಎಲ್ಲಾ ಕಡೆಗಳಲ್ಲಿ ವಿಸ್ತಾರವಾಗಿದ್ದು ಸುಖ ಸಮಾಧಾನಗಳಿಂದ ಕೂಡಿತ್ತು. ಅಲ್ಲಿ ಮೊದಲಿನಿಂದಲೂ ವಾಸವಾಗಿದ್ದವರು ಹಾಮ್ಯರೇ.


ಬಾಬೆಲಿನವರೇ, ಏಳಿರಿ. ಅಗುಳಿಯೂ, ಬಾಗಿಲೂ ಬೇಕೆನ್ನದೆ ನೆಮ್ಮದಿಯಿಂದ ನಿರ್ಭಯವಾಗಿ ಪ್ರತ್ಯೇಕವಾಗಿ ವಾಸಿಸುವ ಜನಾಂಗದ ಮೇಲೆ ಬೀಳಿರಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು