Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಅವನೂ, ಅವನ ಉಪಪತ್ನಿಯೂ, ಸೇವಕನೂ ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಹೊತ್ತು ಹೋಯಿತು; ಸಾಯಂಕಾಲವಾಗುತ್ತಿದೆ, ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಆ ಲೇವಿಯೂ ಅವನ ಉಪಪತ್ನಿಯೂ ಅವನ ಆಳೂ ಹೊರಡಲು ಎದ್ದರು. ಆದರೆ ಆ ಸ್ತ್ರೀಯ ತಂದೆಯು, “ಈಗ ಕತ್ತಲಾಗುತ್ತಾ ಬಂತು, ಹೊತ್ತು ಮುಳುಗುವುದರಲ್ಲಿದೆ. ಈ ರಾತ್ರಿ ಇಲ್ಲಿಯೇ ಸಂತೋಷದಿಂದ ಕಾಲ ಕಳೆಯಿರಿ. ನಾಳೆ ಬೆಳಿಗ್ಗೆ ನೀವು ಬೇಗನೆ ಎದ್ದು ಪ್ರಯಾಣಮಾಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 19:9
8 ತಿಳಿವುಗಳ ಹೋಲಿಕೆ  

ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.


ನಾಳೆ ಎಂದು ಕೊಚ್ಚಿಕೊಳ್ಳಬೇಡ, ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.


ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;


ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು, “ದಯವಿಟ್ಟು ಮಧ್ಯಾಹ್ನದವರೆಗೆ ಇಲ್ಲೇ ಇದ್ದು ಬಲಹೊಂದು” ಎಂದು ಅವನನ್ನು ಬೇಡಿಕೊಳ್ಳಲು ಅವರು ತಿರುಗಿ ಊಟಕ್ಕೆ ನಿಂತನು.


ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.


ಬೋವಜನು ಅನ್ನಪಾನಗಳನ್ನು ತೆಗೆದುಕೊಂಡು ಸಂತುಷ್ಟನಾಗಿ ರಾಶಿಯ ಬಳಿಯಲ್ಲಿ ಮಲಗಿದ ಮೇಲೆ ರಹಸ್ಯವಾಗಿ ಬಂದು ಅವನ ಕಾಲುಗಳ ಮೇಲಣ ಹೊದಿಕೆಯನ್ನು ತೆಗೆದುಬಿಟ್ಟು, ಕಾಲ್ಬದಿಯಲ್ಲಿ ಮಲಗಿದಳು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು