Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲರೆಲ್ಲರೂ ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನ ದೂತನು ಈ ಮಾತುಗಳನ್ನು ಹೇಳಿದಾಗ ಇಸ್ರಾಯೇಲ್ಯರೆಲ್ಲರೂ ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೂತನು ಜನರಿಗೆ ಯೆಹೋವನ ಈ ಸಂದೇಶವನ್ನು ಕೊಟ್ಟ ಮೇಲೆ ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 2:4
13 ತಿಳಿವುಗಳ ಹೋಲಿಕೆ  

ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.


ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಯೇಸುವಿನ ಹಿಂದೆ ಪಾದಗಳ ಬಳಿಯಲ್ಲಿ ನಿಂತುಕೊಂಡು ಅಳುತ್ತಾ ತನ್ನ ಕಣ್ಣೀರಿನಿಂದ ಆತನ ಪಾದಗಳನ್ನು ನೆನಸುತ್ತಾ ತನ್ನ ತಲೆ ಕೂದಲಿನಿಂದ ಒರಸಿ, ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.


ಈಗ ಹಸಿದಿರುವವರಾದ ನೀವು ಧನ್ಯರು; ನಿಮಗೆ ತೃಪ್ತಿಯಾಗುವುದು. ಈಗ ಅಳುವವರಾದ ನೀವು ಧನ್ಯರು; ನೀವು ನಗುವಿರಿ.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.


ಎಜ್ರನು ದೇವಾಲಯದ ಮುಂದೆ ಅಡ್ಡಬಿದ್ದು ಅಳುತ್ತಾ ವಿಜ್ಞಾಪನೆಯನ್ನೂ, ಪಾಪನಿವೇದನೆಯನ್ನೂ ಮಾಡುತ್ತಿರುವಷ್ಟರಲ್ಲಿ ಇಸ್ರಾಯೇಲರ ಗಂಡಸರು, ಹೆಂಗಸರೂ ಮತ್ತು ಮಕ್ಕಳೂ ಮಹಾಸಮೂಹವಾಗಿ ಅವನ ಬಳಿಗೆ ಕೂಡಿಬಂದರು. ಅಲ್ಲಿನ ಜನರು ಬಹಳವಾಗಿ ದುಃಖಿಸುತ್ತಿದ್ದರು.


ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.


‘ನೀವು ಹೀಗೆ ಮಾಡುವುದಾದರೆ ನಾನು ಈ ದೇಶ ನಿವಾಸಿಗಳನ್ನು ನಿಮ್ಮೆದುರಿನಿಂದ ಓಡಿಸುವುದಿಲ್ಲ; ಅವರು ನಿಮ್ಮ ಪಕ್ಕೆಗಳಿಗೆ ಮುಳ್ಳುಗಳಾಗಿರುವರು; ಅವರ ದೇವತೆಗಳು ನಿಮಗೆ ಉರುಲಾಗುವವು’ ಎಂದು ನಾನು ಮೊದಲೇ ಹೇಳಿದ್ದೆನಲ್ಲಾ” ಅಂದನು.


ಮತ್ತು ಆ ಸ್ಥಳಕ್ಕೆ ಬೋಕೀಮೆಂಬ ಹೆಸರಿಟ್ಟು, ಅಲ್ಲಿಯೇ ಯೆಹೋವನಿಗೋಸ್ಕರ ಯಜ್ಞಮಾಡಿದರು.


ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ವರ್ತಮಾನವನ್ನು ತಿಳಿಸಲು ಎಲ್ಲರೂ ಅಳತೊಡಗಿದರು.


ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು