Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದಿನ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಗ ಬೆನ್ಯಾಮೀನ್ಯರ ಸೈನ್ಯವು ಗಿಬೆಯ ನಗರದಿಂದ ಹೊರಗೆ ಬಂದಿತು. ಆ ದಿನದ ಯುದ್ಧದಲ್ಲಿ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲ್ ಸೈನ್ಯದ ಇಪ್ಪತ್ತೆರಡು ಸಾವಿರ ಜನರನ್ನು ಕೊಂದುಹಾಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಬೆನ್ಯಾಮೀನ್ಯರು ಗಿಬೆಯದಿಂದ ಹೊರಟು, ಇಸ್ರಾಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿವಸದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:21
13 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆ ಗುರುತು ಕಾಣಲಿಲ್ಲ.


ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ಇದು ಸಾಲದೆಂದು ನೀವು ಯೆಹೂದ್ಯರನ್ನು, ಯೆರೂಸಲೇಮಿನವರನ್ನೂ ಬಲಾತ್ಕರಿಸಿ ದಾಸರನ್ನಾಗಿಯೂ, ದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ದೇವರಾದ ಯೆಹೋವನಿಗೆ ವಿರುದ್ಧವಾದ ಅಪರಾಧಗಳು ನಿಮ್ಮಲ್ಲಿಯೂ ಇಲ್ಲವೇ?


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುದ್ಧ ಕಾರ್ಯಗಳು ನಡೆಯದಂತೆ ಎಚ್ಚರದಿಂದಿರಬೇಕು.


“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.


ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ಸಿದ್ಧರಾಗಿ, ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು.


ಇಸ್ರಾಯೇಲ್ಯರು ತಿರುಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹಕಟ್ಟಿದ ಸ್ಥಳದಲ್ಲೇ ತಿರುಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು