Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಎರಡನೆಯ ದಿನವೂ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಸೈನ್ಯದ ಮೇಲೆ ಧಾಳಿಮಾಡಲು ಗಿಬೆಯ ಪಟ್ಟಣದಿಂದ ಹೊರಗೆ ಬಂತು. ಈ ಸಲ ಬೆನ್ಯಾಮೀನ್ಯರ ಸೈನ್ಯವು ಇಸ್ರೇಲರ ಹದಿನೆಂಟು ಸಾವಿರ ಜನರನ್ನು ಕೊಂದುಹಾಕಿತು. ಇಸ್ರೇಲ್ ಸೈನ್ಯದ ಆ ಜನರೆಲ್ಲಾ ತರಬೇತಿ ಪಡೆದ ಸೈನಿಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:25
11 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಆದ್ದರಿಂದ ಅವರು ಎರಡನೆಯ ದಿನದಲ್ಲಿಯೂ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.


ಆಗ ಇಸ್ರಾಯೇಲ್ಯರೆಲ್ಲರೂ, ಎಲ್ಲಾ ಜನರೂ ಬೇತೇಲಿಗೆ ಹೋಗಿ ಅಲ್ಲಿ ಯೆಹೋವನ ಮುಂದೆ ಅಳುತ್ತಾ ಬಿದ್ದು ಸಾಯಂಕಾಲದ ವರೆಗೆ ಉಪವಾಸಮಾಡಿದರು. ಅಲ್ಲಿ ಅವರು ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.


“ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು.


ಇಸ್ರಾಯೇಲೇ, ಗಿಬ್ಯದಲ್ಲಿ ದುರಾಚಾರವು ನಡೆದಂದಿನಿಂದ ನೀನು ಪಾಪಮಾಡುತ್ತಾ ಬಂದಿದ್ದಿ; ಆಹಾ, ನಿನ್ನ ಜನರು ಅಲ್ಲಿ ನಿಂತಿದ್ದಾರೆ, ದುರಾಚಾರಿಗಳಿಗೆ ವಿರುದ್ಧವಾದ ಗಿಬ್ಯದಲ್ಲಿ ನಡೆದ ಯುದ್ಧಕ್ಕೆ ಅವರು ತುತ್ತಾಗುವುದಿಲ್ಲವೋ?.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು