Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 20:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಮಂಜೂಷವು ಆ ಊರೊಳಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇಸ್ರೇಲರು ಯೆಹೋವನಿಗೆ ಒಂದು ಪ್ರಶ್ನೆಯನ್ನು ಕೇಳಿದರು. (ಆ ಕಾಲದಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯು ಬೇತೇಲಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 20:27
12 ತಿಳಿವುಗಳ ಹೋಲಿಕೆ  

ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.


“ನಾನು ಮೊದಲು ನನ್ನ ನಾಮವನ್ನು ಸ್ಥಾಪಿಸಿದ ಶೀಲೋವಿನಲ್ಲಿನ ನನ್ನ ಸ್ಥಾನಕ್ಕೆ ನೀವು ಹೋಗಿ ನನ್ನ ಜನರಾದ ಇಸ್ರಾಯೇಲರ ಅಧರ್ಮದ ನಿಮಿತ್ತ ಅದಕ್ಕೆ ತಂದ ಗತಿಯನ್ನು ನೋಡಿರಿ.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಇಸ್ರಾಯೇಲ್ಯರು ಹೋಗಿ ಯೆಹೋವನ ಮುಂದೆ ಅಳುತ್ತಾ, “ನಾವು ತಿರುಗಿ ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೋ?” ಎಂದು ಕೇಳಲು, ಆತನು, “ಹೋಗಿ ಯುದ್ಧಮಾಡಿರಿ” ಅಂದನು.


ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.


ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.


ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು


ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.


ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು