Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಗ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬುದು ಅವರ ನೆನಪಿಗೆ ಬಂದಿತು. (ಶೀಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ, ಲೆಬೋನದ ದಕ್ಷಿಣಕ್ಕೂ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮಗೊಂದು ವಿಚಾರಹೊಳೆದಿದೆ. ಇದು ಶೀಲೋವಿನಲ್ಲಿ ಯೆಹೋವನ ಉತ್ಸವ ನಡೆಯುವ ಕಾಲ. ಈ ಉತ್ಸವವನ್ನು ಅಲ್ಲಿ ಪ್ರತಿವರ್ಷ ಆಚರಿಸಲಾಗುತ್ತದೆ.” (ಶೀಲೋವ್ ನಗರವು ಬೇತೇಲ್ ನಗರದ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ದಾರಿಯ ಪೂರ್ವಕ್ಕೂ ಲೆಬೋನಿನ ದಕ್ಷಿಣಕ್ಕೂ ಇದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:19
20 ತಿಳಿವುಗಳ ಹೋಲಿಕೆ  

ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,


ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.


ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.


ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.


ದೇಶವೆಲ್ಲಾ ತಮ್ಮ ವಶವಾದ ಮೇಲೆ ಇಸ್ರಾಯೇಲ್ಯ ಸಮೂಹದ ಎಲ್ಲಾ ಜನರೂ ಶೀಲೋವಿನಲ್ಲಿ ಕೂಡಿ ಬಂದು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ನೀವು ಕಣದ ಕೆಲಸವನ್ನೂ, ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ ಏಳು ದಿನಗಳವರೆಗೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.


ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ನೀವು ಚೈತ್ರ ಮಾಸದಲ್ಲಿ ಪಸ್ಕಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದ ಒಂದು ರಾತ್ರಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಜರನ್ನು ಐಗುಪ್ತದೇಶದಿಂದ ಬಿಡಿಸಿದ ನೆನಪಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು.


“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.


“‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.


ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು