Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 21:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರ ತಂದೆಗಳೂ, ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಯುವತಿಯರ ತಂದೆಗಳಾಗಲಿ ಸಹೋದರರಾಗಲಿ ನಮ್ಮಲ್ಲಿಗೆ ಬಂದು ದೂರು ಹೇಳುತ್ತಾರೆ. ಆಗ ನಾವು ಅವರಿಗೆ, ‘ಬೆನ್ಯಾಮೀನ್ಯರ ಗಂಡಸರಿಗೆ ದಯೆತೋರಿಸಿರಿ; ಅವರು ಆ ಸ್ತ್ರೀಯರನ್ನು ಮದುವೆಯಾಗಲಿ. ಅವರು ನಿಮ್ಮಿಂದ ನಿಮ್ಮ ಹೆಣ್ಣುಮಕ್ಕಳನ್ನು ತೆಗೆದುಕೊಂಡು ಹೋಗಿರುವರೇ ಹೊರತು ಯುದ್ಧವೇನೂ ಮಾಡಿಲ್ಲ. ಅವರು ಕನ್ಯೆಯರನ್ನು ತೆಗೆದುಕೊಂಡು ಹೋದದ್ದರಿಂದ ನೀವು ದೇವರೆದುರಿಗೆ ಮಾಡಿದ ಪ್ರತಿಜ್ಞೆಯನ್ನು ಮುರಿದಂತಾಗುವುದಿಲ್ಲ. ನಿಮ್ಮ ಕನ್ಯೆಯರನ್ನು ಅವರಿಗೆ ಕೊಡುವುದಿಲ್ಲವೆಂದು ನೀವು ಪ್ರತಿಜ್ಞೆ ಮಾಡಿದ್ದೀರಿ. ನೀವು ಬೆನ್ಯಾಮೀನ್ಯರಿಗೆ ನಿಮ್ಮ ಕನ್ಯೆಯರನ್ನು ಕೊಟ್ಟಿಲ್ಲ. ಆದರೆ ಅವರು ನಿಮ್ಮ ಕನ್ಯೆಯರನ್ನು ತೆಗೆದುಕೊಂಡು ಹೋದರು. ಆದ್ದರಿಂದ ನೀವು ನಿಮ್ಮ ಪ್ರತಿಜ್ಞೆಯನ್ನು ಮುರಿಯಲಿಲ್ಲ’ ಎಂದು ಹೇಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 21:22
10 ತಿಳಿವುಗಳ ಹೋಲಿಕೆ  

ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದ ಕಾರಣ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ” ಎಂದು ಮಾತನಾಡಿಕೊಳ್ಳುತ್ತಿದ್ದರು.


ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.


ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.


“ಇದು ದೇವರಿಗಾಗಿ” ಎಂದು ದುಡುಕಿ ಹರಕೆಮಾಡುವುದು, ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.


ಇಸ್ರಾಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಆದರೂ ಅನೇಕರಿಗೆ ಕನ್ಯೆಯರು ದೊರೆಯಲಿಲ್ಲ.


ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟಿದ್ದೇವಲ್ಲಾ” ಎಂದು ಗೋಳಾಡಿದರು.


ಆ ದಿನದಲ್ಲಿ ನೋಹನೂ ಶೇಮ್, ಹಾಮ್, ಯೆಫೆತರೆಂಬ ಅವನ ಮಕ್ಕಳು, ಅವನ ಹೆಂಡತಿಯೂ ಮೂರು ಮಂದಿ ಸೊಸೆಯರೂ ನಾವೆಯಲ್ಲಿ ಸೇರಿದರು.


ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು