Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇಶದಲ್ಲಿ ನಾಲ್ವತ್ತು ವರುಷಗಳ ಪರ್ಯಂತರ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:11
11 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರು ಇಸ್ರಾಯೇಲ್ಯರ ಮುಂದೆ ಬಹಳವಾಗಿ ತಗ್ಗಿಸಲ್ಪಟ್ಟರು; ಅವರು ಪುನಃ ತಲೆಯೆತ್ತಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಲ್ವತ್ತು ವರ್ಷಗಳ ಕಾಲ ದೇಶದಲ್ಲಿ ಸಮಾಧಾನವಿತ್ತು.


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.


ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.


ಆ ದಿನಗಳಲ್ಲಿ ಯೆಹೂದ್ಯರಿಗೆ ಶತ್ರುಪೀಡೆ ತಪ್ಪಿ ವಿಶ್ರಾಂತಿ ಉಂಟಾಯಿತು. ಆ ತಿಂಗಳಿನಲ್ಲಿ ಸಂತಾಪವು ಪರಿಹಾರವಾಗಿ ಅವರಿಗೆ ಸಂತೋಷವುಂಟಾಯಿತು; ದುಃಖವು ಹೋಗಿ ಸುಖಕಾಲವು ಬಂದಿತು. ಆದುದರಿಂದ ಅವರು ಆ ದಿನಗಳಲ್ಲಿ ಉತ್ಸವಭೋಜನ ಮಾಡಿ ಒಬ್ಬರಿಗೊಬ್ಬರು ಭೋಜನ ಪದಾರ್ಥಗಳನ್ನು ವಿನಿಮಯ ಮಾಡಿಕೊಂಡು ಬಡವರಿಗೆ ದಾನಧರ್ಮ ಮಾಡಬೇಕು.


ಕೆನಜನ ಮಕ್ಕಳು ಒತ್ನೀಯೇಲ್ ಮತ್ತು ಸೆರಾಯ ಎಂಬುವವರು. ಒತ್ನೀಯೇಲನ ಮಕ್ಕಳು ಹತತ್ ಮತ್ತು ಮೆಯೋನೋತೈ.


ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.


ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ವಶಪಡಿಸಿಕೊಂಡನು. ಅವನಿಗೆ ಕಾಲೇಬನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಟ್ಟನು.


ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.


ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಉಪಶಮನವನ್ನು ಪಡೆದ ಮೇಲೆ ಅವರು ತಿರುಗಿ ದ್ರೋಹಿಗಳಾಗಿ ನಡೆಯುತ್ತಿರುವುದನ್ನು ನೀನು ಕಂಡು ಅವರ ಮೇಲೆ ದೊರೆತನ ನಡೆಸತಕ್ಕ ವೈರಿಗಳ ಕೈಗೆ ಅವರನ್ನು ಒಪ್ಪಿಸಿದೆ. ಆಗ ಅವರು ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು ಪುನಃ ಪರಲೋಕದಿಂದ ನೀನು ಕೇಳಿ ನಿನ್ನ ಕರುಣಾತಿಶಯದಿಂದ ಅವರನ್ನು ಅನೇಕಾವರ್ತಿ ರಕ್ಷಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು