Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 3:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲ್ಯರು ಅವನ ಬಳಿಗೆ ಬಂದು ಗಟ್ಟಾ ಇಳಿದು ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 3:27
13 ತಿಳಿವುಗಳ ಹೋಲಿಕೆ  

ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು.


ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.


ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.


ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು.


ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ


ಆ ಬೆಟ್ಟದ ಸೀಮೆಯನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದುಹಾಕಬಹುದು. ಅದಕ್ಕೆ ಸೇರಿರುವ ಬಯಲು ಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರಾಗಿ ಕಬ್ಬಿಣದ ರಥಗಳುಳ್ಳವರಾಗಿದ್ದರೂ ನೀವು ಅವರನ್ನು ಹೊರದೂಡುವಿರಿ” ಎಂದು ಉತ್ತರ ಕೊಟ್ಟನು.


ಯೆಹೋಶುವನು ಅವರಿಗೆ, “ಮಹಾಜನಾಂಗವಾದ ನಿಮಗೆ ಎಫ್ರಾಯೀಮ್ ಬೆಟ್ಟದ ಸೀಮೆ ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ಸೀಮೆಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳಮಾಡಿಕೊಳ್ಳಿ” ಎಂದನು.


ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,


ಅಬೀಮೆಲೆಕನ ಮರಣದ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ, ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಇಸ್ರಾಯೇಲ್ಯರನ್ನು ರಕ್ಷಿಸಿವುದಕ್ಕೋಸ್ಕರ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸವಾಗಿದ್ದನು.


ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ” ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು