Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದುದರಿಂದ ಸೀಸೆರನು ಕಾಲುನಡಿಗೆಯಿಂದ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಸೀಸೆರನು ಓಡಿಹೋದನು. ಅವನು ಯಾಯೇಲ ಎಂಬ ಒಬ್ಬ ಮಹಿಳೆ ವಾಸವಾಗಿದ್ದ ಗುಡಾರಕ್ಕೆ ಬಂದನು. ಯಾಯೇಲಳು ಹೆಬೆರನ ಹೆಂಡತಿ. ಹೆಬೆರನು ಕೇನ್ಯನಾಗಿದ್ದನು. ಹಾಚೋರಿನ ಅರಸನಾದ ಯಾಬೀನ ಮತ್ತು ಕೇನ್ಯನಾದ ಹೆಬೆರನ ಕುಟುಂಬಗಳ ಮಧ್ಯೆ ಒಳ್ಳೆಯ ಸಮಾಧಾನವಿದ್ದಿತು. ಅದಕ್ಕಾಗಿ ಸೀಸೆರನು ಯಾಯೇಲಳ ಗುಡಾರಕ್ಕೆ ಓಡಿಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 4:17
14 ತಿಳಿವುಗಳ ಹೋಲಿಕೆ  

“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.


ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.


“ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳೆ ಭಾಗ್ಯವಂತಳು. ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಯೇ ಆಶೀರ್ವದಿಸಲ್ಪಟ್ಟವಳು.


“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿನಗಳಲ್ಲಿಯೂ ರಾಜಮಾರ್ಗಗಳಲ್ಲಿ ಸಂಚಾರವು ನಿಂತುಹೋಯಿತು. ಪ್ರಯಾಣಿಕರು ಅಂಕುಡೊಂಕಾದ ದಾರಿಹಿಡಿದು ಹೋದರು.


ಬಾರಾಕನು ಅವನ ಸೈನ್ಯರಥಗಳನ್ನು ಅನ್ಯಜನರ ಹರೋಷೆತಿನ ವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರೂ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.


ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿಗೆ ಬನ್ನಿರಿ” ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.


ಆ ದಿನದಲ್ಲಿ ಶೂರರಲ್ಲಿ ಧೀರನಾದವನು ಬೆತ್ತಲೆಯಾಗಿ ಓಡಿಹೋಗುವನು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು