Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ನಾನು ನಿಮಗೆ, ‘ಯೆಹೋವನಾದ ನಾನೇ ನಿಮ್ಮ ದೇವರು! ಅಮೋರಿಯರ ಪ್ರದೇಶದಲ್ಲಿದ್ದರೂ ಅವರ ಸುಳ್ಳುದೇವರುಗಳನ್ನು ನೀವು ಪೂಜಿಸಕೂಡದು ಎಂದು ಹೇಳಿದ್ದೆ.’ ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:10
23 ತಿಳಿವುಗಳ ಹೋಲಿಕೆ  

ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು, “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಾರದೆ, ನನ್ನ ಮಾತನ್ನು ಕೇಳದೆ ಹೋದರು.


ಇವರೆಲ್ಲರನ್ನೂ ಕಾರೇಹನ ಮಗನಾದ ಯೋಹಾನಾನನೂ, ಸಕಲ ಸೇನಾಧಿಪತಿಗಳೂ ಕರೆದುಕೊಂಡು ಐಗುಪ್ತಕ್ಕೆ ಹೋಗಿ ತಹಪನೇಸ್ ಊರಿಗೆ ಸೇರಿದರು. ಯೆಹೋವನ ಮಾತನ್ನು ಕೇಳಲೇ ಇಲ್ಲ.


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.


ನಾನು ಯೆಹೋವನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ; ನೀವಾದರೆ ನಿಮ್ಮ ದೇವರಾದ ಯೆಹೋವನು ನನ್ನ ಮೂಲಕ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನೂ ಕೇಳಲಿಲ್ಲ.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು’ ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.


ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.


ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ, ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!


ಯೆಹೋವನ ಭಕ್ತರಾಗಿದ್ದರೂ ತಾವು ಬಿಟ್ಟು ಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.


ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.


ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ, ಅವರನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ನಿಮಗೆ ಕೊಟ್ಟೆನು.


ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.


ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.


ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.


ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕಾಗಲಿ ಉಪದೇಶ ಹೊಂದಲಿಕ್ಕಾಗಲಿ ಒಪ್ಪಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು