Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ - ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:12
16 ತಿಳಿವುಗಳ ಹೋಲಿಕೆ  

ಆ ದೂತನು ಆಕೆಯ ಬಳಿಗೆ ಬಂದು “ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ ಕರ್ತನು ನಿನ್ನ ಸಂಗಡ ಇದ್ದಾನೆ” ಅಂದನು.


ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.


ಕರ್ತನ ದೂತನು ಧೂಪಪೀಠದ ಬಲಗಡೆಯಲ್ಲಿ ನಿಂತುಕೊಂಡವನಾಗಿ ಅವನಿಗೆ ಕಾಣಿಸಿಕೊಂಡನು.


ಒಂದಾನೊಂದು ದಿನ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.


ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.


ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು