Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು; ಅದು ಈ ವರೆಗೂ ಅಬೀಯೆಜೆರನ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗಿದ್ಯೋನನು ಅಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ಷಾಲೋಮ್ ಎಂದು ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗಿದ್ಯೋನನು ಯೆಹೋವನ್ನು ಆರಾಧಿಸಲು ಆ ಸ್ಥಳದಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಗಿದ್ಯೋನನು ಅದಕ್ಕೆ “ಯೆಹೋವನು ಶಾಂತಿಸ್ವರೂಪನು” ಎಂದು ಹೆಸರಿಟ್ಟನು. ಆ ಯಜ್ಞವೇದಿಕೆಯು ಇಂದಿಗೂ ಅಬೀಯೆಜೆರ್ ಗೋತ್ರದವರು ವಾಸಿಸುವ ಒಫ್ರದಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:24
20 ತಿಳಿವುಗಳ ಹೋಲಿಕೆ  

ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.


ಯೋವಾಷನ ಮಗನಾದ ಗಿದ್ಯೋನನು ದಿನತುಂಬಿದ ಮುದುಕನಾಗಿ ಮರಣ ಹೊಂದಲು, ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿಯು ಅವನ ತಂದೆಯಾದ ಯೋವಾಷನದಾಗಿತ್ತು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳವು; ಅದನ್ನು ನಿರ್ಮಿಸಿದ ದಿನದಿಂದ ಆ ಪಟ್ಟಣಕ್ಕೆ “ಯೆಹೋವನ ನೆಲೆ” ಎಂದು ಹೆಸರಾಗುವುದು.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ರೂಬೇನ್ಯರೂ ಗಾದ್ಯರೂ ಹಾಗೂ ಮನಸ್ಸೆ ಕುಲದ ಅರ್ಧ ಜನರೂ ಕಾನಾನ್ ದೇಶದಲ್ಲಿರುವ ಯೊರ್ದನಿನ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ದೊಡ್ಡ ಯಜ್ಞವೇದಿಯನ್ನು ಕಟ್ಟಿದರು.


ಅಲ್ಲಿ ಯಾಕೋಬನು ಯೆಹೋವನ ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಏಲ್ ಎಲೋಹೆ ಇಸ್ರಾಯೇಲ್” ಎಂದು ಹೆಸರಿಟ್ಟನು.


ಗಿಲ್ಯಾದನ ವಂಶದವರು ಯಾರೆಂದರೆ: ಈಯೆಜೆರನ ವಂಶಸ್ಥರಾದ ಈಯೆಜೆರ್ಯರು, ಹೇಲೆಕನ ವಂಶಸ್ಥರಾದ ಹೇಲೆಕ್ಯರು,


ಆದರೆ ಯೆಹೋವನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ” ಅಂದನು.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಆದ್ದರಿಂದ ಇಸ್ರಾಯೇಲರೆಲ್ಲರೂ ಅದನ್ನು ಪೂಜಿಸುತ್ತಿದ್ದುದರಿಂದ ದೈವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಅಲ್ಲಿ ಅವನ ಸ್ವಂತ ಮನೆಯಿದ್ದುದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ವಿವಾದಗಳನ್ನು ತೀರಿಸುತ್ತಿದ್ದನು.


ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.


ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.


ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು