Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇವರು ಬಿತ್ತನೆಮಾಡಿದಾಗಲೆಲ್ಲಾ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪೂರ್ವದಿಂದ ಮಿದ್ಯಾನ್ಯರೂ ಅಮಾಲೇಕ್ಯರೂ ಯಾವಾಗಲೂ ಬಂದು ಇವರ ಬೆಳೆಗಳನ್ನು ನಾಶಪಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:3
25 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.


ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ಆಗ ಯಾಕೋಬನು ಪ್ರಯಾಣ ಮಾಡಿ ಪೂರ್ವ ದಿಕ್ಕಿನ ಜನರ ಸೀಮೆಗೆ ಬಂದನು.


ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ನಾನು ಬಿತ್ತಿದ್ದನ್ನು ಮತ್ತೊಬ್ಬನು ಉಣ್ಣಲಿ, ನನ್ನ ಬೆಳೆಯು ನಿರ್ಮೂಲವಾಗಲಿ!


ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.


ಅವರು ಗಾಜಾ ಪ್ರಾಂತ್ಯದವರೆಗಿದ್ದ ಎಲ್ಲಾ ಭೂಮಿಯ ಹುಟ್ಟುವಳಿಯನ್ನು ಹಾಳುಮಾಡಿಬಿಡುತ್ತಿದ್ದುದರಿಂದ ಇವರಿಗೆ ದವಸಧಾನ್ಯವಾಗಲಿ, ಕುರಿ, ದನ, ಕತ್ತೆಗಳಾಗಲಿ ಉಳಿಯಲೇ ಇಲ್ಲ.


ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.


ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;


ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಬಾಧ್ಯವಾಗಿ ವಶಪಡಿಸುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿಂದು, ನಿನ್ನ ಹಾಲನ್ನು ಕುಡಿದುಬಿಡುವರು.


ಅಬ್ರಹಾಮನು ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವ ದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿ ಬಿಟ್ಟನು.


ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.


ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವರಿಂದ ನಿಮ್ಮನ್ನು ಬಿಡಿಸಿದರೂ


ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.


‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು