ನ್ಯಾಯಸ್ಥಾಪಕರು 6:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಗ ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತ್ತು. ಅವನು ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಗ ಗಿದ್ಯೋನನು ಯೆಹೋವನ ಆತ್ಮನ ಆವೇಶವುಳ್ಳವನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಗಿದ್ಯೋನನ ಮೇಲೆ ಯೆಹೋವನ ಆತ್ಮವು ಬಂದಿತು; ಅವನಿಗೆ ಹೆಚ್ಚಿನ ಶಕ್ತಿಯನ್ನು ಕೊಟ್ಟಿತು. ಅಬೀಯೇಜೆರನ ಗೋತ್ರದವರನ್ನು ತನ್ನನ್ನು ಹಿಂಬಾಲಿಸಲು ಕರೆಯುವುದಕ್ಕಾಗಿ ಗಿದ್ಯೋನನು ತುತ್ತೂರಿಯನ್ನು ಊದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು. ಅಧ್ಯಾಯವನ್ನು ನೋಡಿ |
ಆಗ ಮೂವತ್ತು ಜನರಲ್ಲಿ ಮುಖ್ಯಸ್ಥನಾದ ಅಮಾಸೈಯು ಆತ್ಮಾವೇಶವುಳ್ಳವನಾಗಿ, “ದಾವೀದನೇ, ನಾವು ನಿನ್ನವರು; ಶುಭವಾಗಲಿ! ಇಷಯನ ಮಗನೇ, ನಾವು ನಿನ್ನ ಪಕ್ಷದವರು; ಶುಭವಾಗಲಿ! ನಿನಗೂ ನಿನ್ನ ಸಹಾಯಕರಿಗೂ ಶುಭವಾಗಲಿ! ನಿನ್ನ ದೇವರು ನಿನಗೆ ಜಯವನ್ನು ಕೊಡುವವನಾಗಿದ್ದಾನೆ” ಎಂದು ಹೇಳಿದನು. ಆಗ ದಾವೀದನು ಅವರನ್ನು ತನ್ನ ಜೊತೆಯಲ್ಲಿ ಸೇರಿಸಿಕೊಂಡು ಸೈನ್ಯಾಧಿಪತಿಗಳನ್ನಾಗಿ ನೇಮಿಸಿದನು.
ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.