Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆ; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿ ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿಬಿಟ್ಟಿತು,” ಎಂದು ಹೇಳಿದನು. ಅವನ ಜೊತೆಗಾರನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು - ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ವಿುದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿ ಬಿಟ್ಟಿತು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಗಿದ್ಯೋನನು ಶತ್ರುಗಳ ಪಾಳೆಯಕ್ಕೆ ಬಂದಾಗ ಒಬ್ಬನ ಮಾತನ್ನು ಕೇಳಿಸಿಕೊಂಡನು. ಆ ಮನುಷ್ಯನು ತಾನು ಕಂಡ ಒಂದು ಕನಸಿನ ಬಗ್ಗೆ ತನ್ನ ಮಿತ್ರನಿಗೆ ಹೇಳುತ್ತಿದ್ದನು. “ನಾನು ಕನಸಿನಲ್ಲಿ ಒಂದು ದುಂಡಾದ ರೊಟ್ಟಿಯು ಉರುಳಿಕೊಂಡು ಮಿದ್ಯಾನ್ಯರ ಪಾಳೆಯದಲ್ಲಿ ಬರುವುದನ್ನು ಕಂಡೆ. ಆ ರೊಟ್ಟಿಯು ರಭಸದಿಂದ ಬಂದು ಒಂದು ಗುಡಾರಕ್ಕೆ ಅಪ್ಪಳಿಸಲು ಆ ಗುಡಾರವು ಕುಸಿದುಬಿತ್ತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗಿದ್ಯೋನನು ಬಂದಾಗ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇನೆಂದರೆ, “ಇಗೋ, ನಾನು ಒಂದು ಕನಸನ್ನು ಕಂಡೆನು. ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾನ್ಯರ ಪಾಳೆಯ ಮೇಲೆ ಹೊರಳಿ, ಒಂದು ಡೇರೆಯ ಮೇಲೆ ಬಂದು, ಅದು ಬೀಳುವ ಹಾಗೆ ಅದನ್ನು ಹೊಡೆದು, ಅದನ್ನು ಕೆಡವಿ ಹಾಕಿತು. ಆಗ ಡೇರೆಯು ಬಿದ್ದುಹೋಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:13
10 ತಿಳಿವುಗಳ ಹೋಲಿಕೆ  

ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.


ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.


ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ, ಒಂದು ಸುತ್ತಿಗೆಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ, ಮೆಲ್ಲಗೆ ಹತ್ತಿರ ಹೋಗಿ, ಅವನ ತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.


ಆಕೆಯು, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲಿ ಉಂಟಾಗುವ ಗೌರವ ನಿನಗೆ ಸಲ್ಲುವುದಿಲ್ಲ. ಯಾಕೆಂದರೆ ಒಬ್ಬ ಸ್ತ್ರೀ ಸೀಸೆರನನ್ನು ಸೋಲಿಸುವಂತೆ ಯೆಹೋವನು ಮಾಡುವನು” ಎಂದು ಹೇಳಿ ದೆಬೋರಳು ಬಾರಾಕನೊಡನೆ ಕೆದೆಷಿಗೆ ಹೋದಳು.


ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.


ಜೆಬಹ, ಚಲ್ಮುನ್ನರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಮೂಡಣದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಭಟರು ಹತರಾಗಿ ಉಳಿದವರು ಇಷ್ಟೇ ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು