Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನ ಜೊತೆಗಾರನು - ಇದು ಇಸ್ರಾಯೇಲ್ಯನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ವಿುದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಮನುಷ್ಯನ ಸ್ನೇಹಿತನು ಕನಸಿನ ಅರ್ಥವನ್ನು ತಿಳಿದುಕೊಂಡು ಅವನಿಗೆ, “ನಿನ್ನ ಕನಸು ಇಸ್ರೇಲಿನ ಯೋವಾಷನ ಮಗನಾದ ಗಿದ್ಯೋನನ ಕುರಿತಾಗಿದೆ. ಗಿದ್ಯೋನನು ಮಿದ್ಯಾನ್ಯರ ಇಡೀ ಸೈನ್ಯವನ್ನು ಸೋಲಿಸುವಂತೆ ದೇವರು ಮಾಡುತ್ತಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:14
14 ತಿಳಿವುಗಳ ಹೋಲಿಕೆ  

“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ನೀನು ಅವನಿಗೂ, ಅವನ ಮನೆಗೂ, ಅವನ ಎಲ್ಲಾ ಸ್ವತ್ತಿಗೂ ಸುತ್ತು ಮುತ್ತಲು ನಿನ್ನ ಕೃಪೆಯ ಬೇಲಿಯನ್ನು ಹಾಕಿದ್ದೀಯಲ್ಲಾ. ಅವನು ಕೈಹಾಕಿದ ಕೆಲಸವನ್ನು ನೀನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲಿ ವೃದ್ಧಿಯಾಗುತ್ತಾ ಬಂದಿದೆ.


ಯೊರ್ದನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲಾ ಅರಸರು ಮತ್ತು ಸಮುದ್ರದ ಬಳಿಯಲ್ಲಿದ್ದ ಎಲ್ಲಾ ಕಾನಾನ್ಯರ ರಾಜರು, ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನಿನ ಹೊಳೆಯನ್ನು ಬತ್ತಿಸಿ, ಅವರನ್ನು ದಾಟಿಸಿದನೆಂಬ ವಾರ್ತೆ ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿಮಿತ್ತವಾಗಿ ಅವರು ಬಲಗುಂದಿ ಹೋದರು.


ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.


ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.


ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.


ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನು


ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.


ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು