Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಗಿದ್ಯೋನನು ಆ ಕನಸನ್ನೂ, ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು, ಇಸ್ರಾಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ, “ಏಳಿರಿ, ಯೆಹೋವನು ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಯೆಹೋವನಿಗೆ ಅಡ್ಡಬಿದ್ದು ಇಸ್ರಾಯೇಲ್ಯರ ಪಾಳೆಯಕ್ಕೆ ಹಿಂದಿರುಗಿ ಬಂದು ಅವರಿಗೆ - ಏಳಿರಿ, ಯೆಹೋವನು ವಿುದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕನಸಿನ ಬಗ್ಗೆ ಮತ್ತು ಅದರ ಅರ್ಥದ ಬಗ್ಗೆ ಅವರು ಮಾತನಾಡುವುದನ್ನು ಕೇಳಿದ ಗಿದ್ಯೋನನು ಯೆಹೋವನಿಗೆ ತಲೆಬಾಗಿ ನಮಸ್ಕರಿಸಿದನು. ಆಮೇಲೆ ಗಿದ್ಯೋನನು ಇಸ್ರೇಲರ ಪಾಳೆಯಕ್ಕೆ ಹಿಂದಿರುಗಿದನು. ಗಿದ್ಯೋನನು ಜನರನ್ನು, “ಏಳಿರಿ! ಯೆಹೋವನು ಮಿದ್ಯಾನ್ಯರನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತಾನೆ” ಎಂದು ಕೂಗಿಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:15
15 ತಿಳಿವುಗಳ ಹೋಲಿಕೆ  

ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.


ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.


ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.


ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಆಗ ಅವನ ಜೊತೆಗಾರನು, “ಇದು ಇಸ್ರಾಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಅಂದನು.


ಮತ್ತು ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪು ಮಾಡಿ ಪ್ರತಿಯೊಬ್ಬನ ಕೈಯಲ್ಲಿ ಕೊಂಬನ್ನೂ, ಉರಿಯುವ ಪಂಜು ಇರುವ ಬರಿಕೊಡವನ್ನೂ ಕೊಟ್ಟು ಅವರಿಗೆ,


ಆಗ ಗಿದ್ಯೋನನು ಅವರಿಗೆ, “ಒಳ್ಳೇದು, ಯೆಹೋವನು ಜೆಬಹ, ಚಲ್ಮುನ್ನರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಕಾಡಿನಲ್ಲಿರುವ ಜಾಲಿಮುಳ್ಳುಗಳಿಂದಲೂ, ಕಾರೆಗಿಡಗಳಿಂದಲೂ ಹೊಡಿಸುವೆನು” ಎಂದು ಹೇಳಿದನು.


ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.


ಅವರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿರಿ; ನಿಮಗೆ ತೋರಿಸಿಬೇಕಾದ ಕಾರ್ಯ ಬಂದಿದೆ” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು