Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಾಗ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದ ವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾ ಪ್ರಾಂತ್ಯದ ವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ಮುನ್ನೂರು ಮಂದಿಯು ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಯೆಹೋವನು ಮಾಡಿದನು. ಪಾಳೆಯದವರು ಚೆರೇರದ ದಾರಿಯಲ್ಲಿರುವ ಬೇತ್‍ಷಿಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:22
18 ತಿಳಿವುಗಳ ಹೋಲಿಕೆ  

ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.


ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.


ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.


“ಐಗುಪ್ತರನ್ನು ಐಗುಪ್ತ್ಯರ ಮೇಲೆಯೇ ಎಬ್ಬಿಸುವೆನು: ಸಹೋದರನಿಗೆ ವಿರುದ್ಧವಾಗಿ ಸಹೋದರನು, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರುದ್ಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಹೋರಾಡುವವು.


ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ.


ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.


ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಲು ಯೆಹೋಶುವನು ಜನರಿಗೆ, “ಆರ್ಭಟಿಸಿರಿ, ಯೆಹೋವನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.


ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.


ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಕೊಡತಕ್ಕ ಕಾಲ ಬಂದಾಗ ಅವನು ಅವಳನ್ನು ಮೆಹೋಲದ ಅದ್ರೀಯೇಲ ಎಂಬವನಿಗೆ ಮದುವೆಮಾಡಿ ಕೊಟ್ಟನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನನ್ನು ಸಂಹರಿಸಲಿ ಎಂದು ಅಪ್ಪಣೆಕೊಡುವೆನು; ಪ್ರತಿಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರುದ್ಧವಾಗಿರುವುದು.


ದಿಕ್ಕಿಲ್ಲದವರನ್ನು ಮರೆಯಲ್ಲಿ ನುಂಗಲು ಹೆಚ್ಚಳಪಡುವವರಾಗಿ ನನ್ನನ್ನು ಚದುರಿಸಬೇಕೆಂದು ನನ್ನ ಮೇಲೆ ಬಿರುಗಾಳಿಯಂತೆ ನುಗ್ಗಿದ ಅವನ ಭಟರ ತಲೆಯನ್ನು ಅವನ ದೊಣ್ಣೆಗಳಿಂದಲೇ ಒಡೆದಿದ್ದೀ


ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”


ಮೇಲಿನಿಂದ ಹರಿದು ಬರುತ್ತಿದ್ದ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದು ಹೋಯಿತು ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.


ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು