Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ತಿರುಗಿ ಗಿದ್ಯೋನನಿಗೆ, “ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ನಾನು, ಅಲ್ಲಿ ಈ ಜನರ ಸಂಖ್ಯೆಯನ್ನು ಕಡಿಮೆಮಾಡಿ ನಿನಗೆ ಕೊಡುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ಪುನಃ ಗಿದ್ಯೋನನಿಗೆ, “ನಿನ್ನ ಬಳಿ ಇರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಒಂದು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗಾಗಿ ಆರಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ. ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ತಿರಿಗಿ ಗಿದ್ಯೋನನಿಗೆ - ನಿನ್ನ ಬಳಿಯಲ್ಲಿರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗೋಸ್ಕರ ಪರೀಕ್ಷಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ; ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಹೋವನು ಗಿದ್ಯೋನನಿಗೆ, “ಇನ್ನೂ ಬಹಳಷ್ಟು ಜನರಿದ್ದಾರೆ. ಇವರನ್ನು ನೀನು ನದಿಗೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗಾಗಿ ಪರೀಕ್ಷಿಸುತ್ತೇನೆ. ‘ಯಾವನು ನಿನ್ನ ಜೊತೆಯಲ್ಲಿ ಹೋಗಬಹುದು’ ಎಂದು ನಾನು ಹೇಳುತ್ತೇನೋ ಅವನು ಹೋಗಲಿ. ‘ಯಾವನು ನಿನ್ನ ಜೊತೆಯಲ್ಲಿ ಹೋಗುವುದು ಬೇಡ’ ಎಂದು ನಾನು ಹೇಳುತ್ತೇನೋ ಅವನು ಹೋಗದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಗಿದ್ಯೋನನಿಗೆ, “ಜನರು ಇನ್ನೂ ತುಂಬ ಇದ್ದರೆ; ಅವರನ್ನು ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡಿ ಆರಿಸುವೆನು. ನಿನ್ನ ಸಂಗಡ ಹೋಗುವವರಲ್ಲಿ ಯಾವನನ್ನು ಕುರಿತು ಹೇಳುವೆನೋ, ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು ನಿನ್ನ ಸಂಗಡ ಬರಬಾರದೆಂದು ಯಾವನನ್ನು ಕುರಿತು ಹೇಳುವೆನೋ, ಅವನು ಹೋಗಬಾರದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:4
10 ತಿಳಿವುಗಳ ಹೋಲಿಕೆ  

ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ. ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹು ಜನರಿದ್ದರೂ, ಸ್ವಲ್ಪ ಜನರಿದ್ದರೂ ರಕ್ಷಿಸುವುದು ಯೆಹೋವನಿಗೆ ಅಸಾಧ್ಯವಲ್ಲ” ಎಂದು ಹೇಳಿದನು.


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರೀಕ್ಷಿಸಿದನು.


ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು