Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಯೇಲರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗಾಗಿ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ವಿುದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಜನರು ಆಹಾರವನ್ನೂ, ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು. ಆದರೆ ಗಿದ್ಯೋನನು ಇಸ್ರಾಯೇಲರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ, ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳಭಾಗದ ಕಣಿವೆಯಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 7:8
11 ತಿಳಿವುಗಳ ಹೋಲಿಕೆ  

ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


ಇಷ್ಟರಲ್ಲಿ ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣದೇಶದವರೂ ಸೇರಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.


ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.


ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.


ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.


ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.


ಅದೇ ದಿನದ ರಾತ್ರಿಯಲ್ಲಿ ಯೆಹೋವನು ಅವನಿಗೆ, “ನೀನು ಎದ್ದು ಹೋಗಿ, ಶತ್ರುಗಳ ಪಾಳೆಯದ ಮೇಲೆ ಬೀಳು. ಅದನ್ನು ನಿನಗೆ ಒಪ್ಪಿಸಿಕೊಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು