Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಅವನು ಜೆಬಹ, ಚಲ್ಮುನ್ನ ಎಂಬವರನ್ನು - ನೀವು ತಾಬೋರದಲ್ಲಿ ಕೊಂದು ಹಾಕಿದ ಮನುಷ್ಯರು ಹೇಗಿದ್ದರು ಎಂದು ಕೇಳಲಾಗಿ ಅವರು ಅವನಿಗೆ - ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 8:18
10 ತಿಳಿವುಗಳ ಹೋಲಿಕೆ  

ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಇವರು ಗೊಣಗುಟ್ಟುವವರೂ, ದೂರು ಹೇಳುವವರೂ, ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ, ಬಂಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಹೊಗಳಿಕೆಯ ಮಾತುಗಳನ್ನಾಡುವವರು ಆಗಿದ್ದಾರೆ.


ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು. ತಾಬೋರ್, ಹೆರ್ಮೋನ್ ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.


ಪ್ರತಿಯೊಬ್ಬರು ನೆರೆಯವರೊಡನೆ ಸುಳ್ಳನ್ನಾಡುತ್ತಾರೆ, ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತನಾಡುತ್ತಾರೆ.


ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.


ಮತ್ತು ಪೆನೂವೇಲಿನ ಬುರುಜನ್ನು ಕೆಡವಿಬಿಟ್ಟು ಆ ಊರಿನ ಜನರನ್ನು ಸಂಹರಿಸಿದನು.


ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಯೆಹೋವನಾಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ” ಎಂದು ಹೇಳಿ


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,


ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು