Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಆ ಮುಳ್ಳುಪೊದೆಯು, ‘ನೀವು ನಿಜವಾಗಿಯೂ ನನ್ನನ್ನು ನಿಮ್ಮ ಅರಸನನ್ನಾಗಿ ಮಾಡಬೇಕೆಂದು ಇಚ್ಛೆಪಟ್ಟರೆ, ನೀವು ಬಂದು ನನ್ನ ನೆರಳಿನಲ್ಲಿ ಆಶ್ರಯಪಡೆಯಿರಿ; ನೀವು ಹೀಗೆ ಮಾಡಲು ಒಪ್ಪದಿದ್ದರೆ ನನ್ನಿಂದ ಬೆಂಕಿ ಹೊರಡಲಿ. ಆ ಬೆಂಕಿಯು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡಲಿ’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:15
19 ತಿಳಿವುಗಳ ಹೋಲಿಕೆ  

ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ.


ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.


ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,


ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ, ಮಿಲ್ಲೋ ಕೋಟೆಯವರನ್ನೂ ದಹಿಸಿಬಿಡಲಿ; ಶೆಕೆಮಿನವರಿಂದಲೂ, ಮಿಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ” ಎಂದನು.


ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.


ಬೆಂಕಿಯು ಅದರ ಕೊಂಬೆಗಳಿಂದ ಹೊರಟು ಅದರ ಫಲವನ್ನು ನುಂಗಿ ಬಿಟ್ಟಿದೆ. ಆದುದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿ ಕೊಂಬೆಯೂ ಅದರಲ್ಲಿ ಉಳಿದಿಲ್ಲ.’ ಇದು ಶೋಕ ಗೀತೆ, ಶೋಕ ಗೀತೆಯಾಗಿ ವಾಡಿಕೆಯಲ್ಲಿದೆ.”


ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.


ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.


ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು, ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.


ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.


ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ಅವರೂ ಅದರಂತೆಯೇ ಮಾಡಿ, ಅವನ ಹಿಂದೆ ಹೋಗಿ, ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ, ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್‌ ಕೋಟೆಯವರೆಲ್ಲರೂ ಸತ್ತರು. ಅವರ ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.


ಕೊನೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ, ‘ನೀನು ಬಂದು ನಮಗೆ ಅರಸನಾಗು’ ಅನ್ನಲು


“ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?


ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.


ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ, ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು