Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೆಯೂ ಬರುವುದಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 9:24
12 ತಿಳಿವುಗಳ ಹೋಲಿಕೆ  

ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.


ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


“ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.


“‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆ ಮಾಡಿಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.


ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು