Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಕಪ್ಪಾಗಿದ್ದೇನೆ ಎಂದು ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಕಪ್ಪಾಗಿರುವುದು ಸೂರ್ಯನ ತಾಪದಿಂದ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ಕಾಯುವುದಕ್ಕೆ ಇಟ್ಟರು; ಆದುದರಿಂದ ನನ್ನ ಸ್ವಂತ ದ್ರಾಕ್ಷಿ ತೋಟವನ್ನೂ ನಾನು ಕಾಯ್ದುಕೊಳ್ಳಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿರುವದರಿಂದ ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಉರಿಗೊಂಡು ತೋಟಗಳನ್ನು ಕಾಯುವದಕ್ಕೆ ಹಾಕಿದರು; ನನ್ನ ತೋಟವನ್ನೋ ನಾನು ಕಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸೂರ್ಯನ ತಾಪಕ್ಕೆ ನಾನೆಷ್ಟು ಕಪ್ಪಾಗಿದ್ದೇನೆಂದು ನೋಡಬೇಡಿರಿ. ನನ್ನ ಸಹೋದರರು ನನ್ನ ಮೇಲೆ ಕೋಪಗೊಂಡು ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ನನ್ನನ್ನು ನೇಮಿಸಿದರು. ಆದರೆ ನಾನು ನನ್ನ ತೋಟವನ್ನು ಕಾಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 1:6
15 ತಿಳಿವುಗಳ ಹೋಲಿಕೆ  

ನನ್ನ ಅಣ್ಣತಮ್ಮಂದಿರಿಗೆ ಅಪರಿಚಿತನಂತಾದೆನು; ಒಡಹುಟ್ಟಿದವರಿಗೆ ಪರದೇಶಿಯಂತೆ ಇದ್ದೇನೆ.


ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.


ಆದರೆ ಪೂರ್ವದಲ್ಲಿ ಶಾರೀರಿಕವಾಗಿ ಹುಟ್ಟಿದವನು, ದೇವರಾತ್ಮಬಲದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ ಈಗಲೂ ಆಗುತ್ತಿದೆ.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.


ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು