Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 4:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ರಕ್ತಬೋಳದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ತೆರಳಿ ಹಗಲು ತಂಪಾಗಿ ನೆರಳು ಇಳಿಯುವ ತನಕ ಚರಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 4:6
19 ತಿಳಿವುಗಳ ಹೋಲಿಕೆ  

ಕತ್ತಲು ಕಳೆಯುವ ಮೊದಲು, ಹೊತ್ತು ಮೂಡುವ ಮೊದಲು ಹೊರಟು ಬಾ ನನ್ನ ಪ್ರಿಯನೇ, ಬೇತೆರ್ ಪರ್ವತದಲ್ಲಿ ಜಿಂಕೆಯಂತೆಯೂ ಪ್ರಾಯದ ಹರಿಣದಂತೆಯೂ ಇರು.


ಜಟಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತ ವಿಧವಾದ ಸಾಂಬ್ರಾಣಿ ಗಿಡಗಳು, ರಕ್ತಬೋಳ, ಅಗುರು, ಸಕಲ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನಿನಗೆ ಟಗರು ಮುಂತಾದ ಪುಷ್ಟಪಶುಗಳನ್ನು ಯಜ್ಞರೂಪವಾಗಿ ಸಮರ್ಪಿಸಿ, ಸುವಾಸನೆಯನ್ನು ಉಂಟುಮಾಡುವೆನು; ಯಜ್ಞಕ್ಕಾಗಿ ಹೋತ ಮತ್ತು ಹೋರಿಗಳನ್ನು ಅರ್ಪಿಸುವೆನು. ಸೆಲಾ


ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.


ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.


ನೀವು ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡಬೇಕು. ನೀವು ಅದರ ಮೇಲೆ ನಿಮ್ಮ ಸರ್ವಾಂಗಹೋಮ, ಸಮಾಧಾನಯಜ್ಞ, ಕುರಿದನಗಳನ್ನು ಸಮರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


ಸುಗಂಧಸಸ್ಯದ ಪರ್ವತಗಳಲ್ಲಿ ಜಿಂಕೆಯಂತೆಯೂ, ಪ್ರಾಯದ ಹರಿಣದಂತೆಯೂ ತ್ವರೆಮಾಡಿ ಬಾ ನನ್ನಿನಿಯನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು