Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ನಲ್ಲನು ಬಿಳುಪು ಕೆಂಪು ಬಣ್ಣವುಳ್ಳವನು; ಅವನು ಹತ್ತುಸಾವಿರ ಜನರಲ್ಲಿ ಧ್ವಜಪ್ರಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:10
14 ತಿಳಿವುಗಳ ಹೋಲಿಕೆ  

ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.


ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.


ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.


ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು


ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”


ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ.


ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.


ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು