Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 5:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಇನಿಯನಿಗೆ ಕದ ತೆಗೆದೆನು, ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ನನ್ನೆದೆಯ ಬಡಿತವೇ ನಿಂತಂತಾಯಿತು ಅವನ ದನಿಗೆ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಅವನು, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಇನಿಯನಿಗೆ ಕದತೆಗೆದೆನು; ಅಷ್ಟರಲ್ಲಿ ಅವನು ಹಿಂದಿರುಗಿ ಹೋಗಿದ್ದನು. ಆಹಾ, ಅವನು ಮಾತಾಡಿದಾಗ ನಾನು ಮೂರ್ಛೆ ಹೋಗಿದ್ದೆನಲ್ಲಾ. ಎಷ್ಟು ಹುಡುಕಿದರೂ ಸಿಕ್ಕಲಿಲ್ಲ, ಎಷ್ಟು ಕೂಗಿದರೂ ಉತ್ತರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ನನ್ನ ಪ್ರಿಯನಿಗಾಗಿ ಬಾಗಿಲನ್ನು ತೆರೆಯುವಷ್ಟರಲ್ಲಿ ನನ್ನ ಪ್ರಿಯನು ಹೊರಟುಹೋಗಿದ್ದನು! ಅವನು ಇಲ್ಲದಿರುವುದನ್ನು ಕಂಡು ನನ್ನ ಹೃದಯವು ಕುಸಿದುಹೋಯಿತು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ನಾನು ಅವನಿಗಾಗಿ ಕೂಗಿದರೂ ಅವನು ಉತ್ತರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 5:6
30 ತಿಳಿವುಗಳ ಹೋಲಿಕೆ  

ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.


ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.


ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ, ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೆ ನನ್ನನ್ನು ಆಶ್ರಯಿಸುವರು.


ಅವು ತಮ್ಮ ದನ ಮತ್ತು ಕುರಿಗಳ ಸಂಗಡ ಯೆಹೋವನಿಗೆ ಶರಣುಹೊಗಲು ಹೊರಡುವವು; ಆತನು ಸಿಕ್ಕುವುದಿಲ್ಲ, ಅವುಗಳಿಂದ ಮರೆಯಾಗಿದ್ದಾನೆ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ನಿನ್ನೊಂದಿಗೆ ಸೇರಿ ನಾವು ಅವನನ್ನು ಹುಡುಕೋಣವೇ? ಹೇಳು, ನಿನ್ನ ನಲ್ಲನು ಹೋದುದೆಲ್ಲಿಗೆ?


ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ಸೇನಾಧೀಶ್ವರನಾದ ಯೆಹೋವ ದೇವರೇ, ನಿನ್ನ ಪ್ರಜೆಗಳು ಪ್ರಾರ್ಥಿಸುವಾಗ ನೀನು ಇನ್ನೆಷ್ಟರವರೆಗೆ ಕೋಪಿಸಿಕೊಳ್ಳುವಿ?


ನಾನು ವ್ಯಥೆಪಡುತ್ತಾ ದೇವರನ್ನು ಸ್ಮರಿಸುವೆನು; ಮನಗುಂದಿದವನಾಗಿಯೇ ಹಂಬಲಿಸುವೆನು.


ಮೊರೆಯಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ಕಣ್ಣುಗಳು ಕ್ಷೀಣಿಸುತ್ತವೆ.


ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.


ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.


ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ, ಆತನು ಅವನಿಗೆ ಕನಸುಗಳಿಂದಾಗಲಿ ಊರೀಮಿನಿಂದಾಗಲಿ, ಪ್ರವಾದಿಗಳಿಂದಾಗಲಿ ಉತ್ತರ ಕೊಡಲೇ ಇಲ್ಲ.


ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು