Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 6:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದ್ರಾಕ್ಷೆಯು ಚಿಗುರಿದೆಯೋ, ದಾಳಿಂಬರಗಳು ಹೂಬಿಟ್ಟಿವೆಯೋ ಎಂದು ತಗ್ಗಿನ ಸಸ್ಯಗಳನ್ನು ನೋಡಲು ಬಾದಾವಿುಯ ತೋಟಕ್ಕೆ ನಾನು ಹೋಗಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಣಿವೆಯ ಸಸ್ಯಗಳು ಹಣ್ಣುಬಿಟ್ಟಿವೆಯೋ ದ್ರಾಕ್ಷಿಬಳ್ಳಿಗಳು ಚಿಗುರಿದೆಯೋ ದಾಳಿಂಬರಗಳು ಹೂ ಬಿಟ್ಟಿವೆಯೋ ಎಂದು ನೋಡಲು ಬಾದಾಮಿ ಮರಗಳ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 6:11
14 ತಿಳಿವುಗಳ ಹೋಲಿಕೆ  

ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ಎಲೆಗಳಿದ್ದ ಅಂಜೂರದ ಮರವನ್ನು ದೂರದಿಂದ ಕಂಡು ಅದರಲ್ಲಿ ತನಗೇನಾದರೂ ಹಣ್ಣು ಸಿಕ್ಕೀತೆಂದು ಅಲ್ಲಿಗೆ ಹೋದನು. ಅದರ ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಏಕೆಂದರೆ ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.


ನನ್ನ ಕಾಂತನು ಉದ್ಯಾನವನಗಳಲ್ಲಿ ಮಂದೆಯನ್ನು ಮೇಯಿಸುತ್ತಾ, ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.


ಅದಕ್ಕೆ ಮೂರು ದ್ರಾಕ್ಷಾಲತೆಯ ಕೊಂಬೆಗಳಿದ್ದವು. ಅದು ಚಿಗುರುತ್ತಲೇ ಹೂವುಗಳನ್ನು ಬಿಟ್ಟಿತು; ಆ ಹೂವುಗಳು ಗೊಂಚಲುಗಳಾಗಿ ಹಣ್ಣಾದವು.


ಇದ್ದಕ್ಕಿದ್ದ ಹಾಗೆ ನಾಯಕನಾಗಿ ನಾನು ಬಯಸಿದಂತೆ ದೇಶ ಪ್ರಧಾನರ ರಥಗಳ ನಡುವೆ ನಾನಿರುವುದನ್ನು ಅರಿತೆನು.


ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು