Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷೆಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬರಗಳು ಪುಷ್ಟಿಸಿವೆಯೋ ನೋಡೋಣ! ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವಿಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:12
27 ತಿಳಿವುಗಳ ಹೋಲಿಕೆ  

ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ಪ್ರೇಯಸಿಯೇ, ಸಕಲ ಸೌಂದರ್ಯ ಸೊಬಗಿನಿಂದ ನೀನೆಷ್ಟು ಸುಂದರ, ನೀನೆಷ್ಟು ಮನೋಹರ!


ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಮರಣ ಭಯದಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.


“ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.


ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.


ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ತೋಟಗಳನ್ನು ಹಾಳುಮಾಡುವ ನರಿಗಳನ್ನು, ನರಿಮರಿಗಳನ್ನು ಹಿಡಿಯಿರಿ; ಹೂಬಿಟ್ಟಿರುವ ನಮ್ಮ ದ್ರಾಕ್ಷಿ ತೋಟಗಳು ಹಾಳು.


ಅಂಜೂರದ ಕಾಯಿಗಳು ಹಣ್ಣಾಗಿವೆ, ದ್ರಾಕ್ಷಿಯ ಬಳ್ಳಿಗಳು ಹೂಬಿಟ್ಟಿವೆ, ಅದರ ಪರಿಮಳವನ್ನು ಬೀರುತ್ತಿದೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ನನ್ನೊಂದಿಗೆ ಬಾ!


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ, ಆತುರದಿಂದ ಹುಡುಕುವವರು ನನ್ನನ್ನು ಕಂಡುಕೊಳ್ಳುವರು.


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.


ದೇವರೇ, ನನ್ನ ದೇವರೇ, ಆಗ ನಾನು ನಿನ್ನ ಯಜ್ಞವೇದಿಯ ಬಳಿಗೆ, ನನ್ನ ಆನಂದನಿಧಿಯಾಗಿರುವ ನಿನ್ನ ಹತ್ತಿರಕ್ಕೆ ಸೇರಿ, ಕಿನ್ನರಿಯನ್ನು ನುಡಿಸುತ್ತಾ ನಿನ್ನನ್ನು ಕೊಂಡಾಡುವೆನು.


ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,


ಎನ್ನಿನಿಯನೇ, ವನಕ್ಕೆ ಹೋಗೋಣ ಬಾ, ಹಳ್ಳಿಗಳ ಮಧ್ಯದಲ್ಲಿ ವಾಸಮಾಡುವ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು