Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ, ಬಗೆಬಗೆಯ ಹಳೆಯ ಮತ್ತು ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕಾಮಜನಕ ವೃಕ್ಷಗಳು ಪರಿಮಳಬೀರುತ್ತವೆ, ನನ್ನ ಕಾಂತನೇ, ನಾನು ನಿನಗಾಗಿ ಇಟ್ಟುಕೊಂಡ ಒಳ್ಳೊಳ್ಳೆಯ ಬಗೆಬಗೆಯ ಹಳೆ ಹೊಸ ಹಣ್ಣುಗಳು ನಮ್ಮ ಬಾಗಿಲುಗಳ ಬಳಿ ಸಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕಾಮಜನಕ ಸಸಿಗಳು ಸುವಾಸನೆ ಬೀರುತ್ತವೆ. ನನ್ನ ಪ್ರಿಯನೇ, ನಾನು ನಿನಗೋಸ್ಕರ ಉಳಿಸಿದ ರುಚಿಕರವಾದ ಬಗೆಬಗೆಯ ಹೊಸ ಮತ್ತು ಹಳೆ ಹಣ್ಣುಗಳು ನಮ್ಮ ಬಾಗಿಲ ಬಳಿಯಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:13
21 ತಿಳಿವುಗಳ ಹೋಲಿಕೆ  

ಗೋದಿ ಸುಗ್ಗಿಯ ಕಾಲದಲ್ಲಿ ರೂಬೇನನು ಅಡವಿಗೆ ಹೋಗಿದ್ದಾಗ ಕಾಮಜನಕ ಹಣ್ಣುಗಳನ್ನು ಕಂಡು ತನ್ನ ತಾಯಿಯಾದ ಲೇಯಳಿಗೆ ತಂದು ಕೊಡಲು ರಾಹೇಲಳು ಆಕೆಗೆ, “ನಿನ್ನ ಮಗನು ತಂದಿರುವ ಕಾಮಜನಕ ಹಣ್ಣುಗಳಲ್ಲಿ ಕೆಲವನ್ನು ನನಗೆ ಕೊಡು” ಎಂದು ಕೇಳಿಕೊಂಡಳು.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.


ಆದರೆ ದೇವರ ವಾಕ್ಯಗಳಲ್ಲಿ ಬರೆದಿರುವ ಪ್ರಕಾರ, “ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.”


ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.


ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ನಿನ್ನ ಉದ್ಯಾನದಲ್ಲಿವೆ ದಾಳಿಂಬೆಯಂತಹ ಉತ್ತಮ ವೃಕ್ಷಗಳು, ಜಟಮಾಂಸಿ ಮತ್ತು ಗೋರಂಟೆಗಳು,


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


ನೀನು ನನ್ನ ತಾಯಿಯ ಹಾಲನ್ನು ಕುಡಿದ ನನ್ನ ಅಣ್ಣನ ಹಾಗಿದ್ದರೆ ಎಷ್ಟೋ ಚೆನ್ನಾಗಿತ್ತು! ನಾನು ನಿನ್ನನ್ನು ಹೊರಗೆ ಕಂಡೊಡನೆ ಮುದ್ದಿಟ್ಟರೂ ಯಾರೂ ಹೀನೈಸುತ್ತಿರಲಿಲ್ಲ.


ದ್ರಾಕ್ಷಿಯು ಚಿಗುರಿದೆಯೋ, ದಾಳಿಂಬೆ ಗಿಡಗಳು ಹೂಬಿಟ್ಟಿವೆಯೋ ಎಂದು ತಗ್ಗಿನಲ್ಲಿ ಬೆಳೆದ ಸಸ್ಯಗಳನ್ನು ನೋಡಲು ಬಾದಾಮಿಯ ತೋಟಕ್ಕೆ ನಾನು ಹೋಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು