Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು ! ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:8
10 ತಿಳಿವುಗಳ ಹೋಲಿಕೆ  

ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”


ಉತ್ತರದ ಗಾಳಿಯೇ ಏಳು, ದಕ್ಷಿಣದ ಗಾಳಿಯೇ ಬೀಸು! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಅಸ್ವಸ್ಥಳಾಗಿರುವೆನು ಅನುರಾಗದಿಂದ, ದೀಪದ್ರಾಕ್ಷೆಯಿಂದ ನನ್ನನ್ನು ಉಪಚರಿಸಿರಿ, ಸೇಬು ಹಣ್ಣುಗಳಿಂದ ನನ್ನನ್ನು ಚೈತನ್ಯಗೊಳಿಸಿರಿ.


ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನ ವೃಕ್ಷದಂತಿಹನು. ಅದರ ಫಲವು ನನ್ನ ನಾಲಿಗೆಗೆ ಸುಮಧುರ ನಾನು ಆತನ ನೆರಳಿನಲ್ಲಿ ಕುಳಿತು ಪರಮಾನಂದಗೊಂಡೆನು.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.


ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.


ದ್ರಾಕ್ಷಾಲತೆಯು ಒಣಗಿದೆ ಮತ್ತು ಅಂಜೂರದ ಗಿಡವು ಬಾಡಿಹೋಗಿದೆ; ದಾಳಿಂಬೆ, ಖರ್ಜೂರ ಮತ್ತು ಸೇಬು ಮರಗಳು ಹಾಗು ಹೊಲದ ಸಕಲ ವನವೃಕ್ಷಗಳು ಒಣಗಿ ಹೋಗಿವೆ. ಮನುಷ್ಯರು ಸೊರಗಿ ಸಂತೋಷವಿಲ್ಲದೆ ಕಳೆಗುಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು