Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಚುಂಬನ ಉತ್ತಮ ದ್ರಾಕ್ಷಾರಸದ ಹಾಗಿರಲಿ, ನಿದ್ರಿಸುವವರ ತುಟಿಗಳಲ್ಲಿ ನಯವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನ ಮುದ್ದುಗಳು ಉತ್ತಮದ್ರಾಕ್ಷಾರಸದ ಹಾಗಿರಲಿ; ನಿದ್ರಿಸುವವರ ತುಟಿಗಳಲ್ಲಿ ಸರಾಗವಾಗಿ ಹರಿಯುವ ಈ ರಸವು ನನ್ನ ನಲ್ಲೆಯಾದ ನಿನ್ನಲ್ಲಿಯೂ ಮೆಲ್ಲನೆ ಇಳಿದು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿನ್ನ ಬಾಯಿ ಉತ್ತಮವಾದ ದ್ರಾಕ್ಷಾರಸದಂತಿರಲಿ. ನನ್ನ ಪ್ರಿಯೆಗಾಗಿ ಈ ದ್ರಾಕ್ಷಾರಸವು ಮೆಲ್ಲನೆ ಇಳಿದುಹೋಗುವುದು. ನಿದ್ರಿಸುವವರ ತುಟಿಗಳಲ್ಲಿ ಅದು ಸರಾಗವಾಗಿ ಹರಿದುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:9
18 ತಿಳಿವುಗಳ ಹೋಲಿಕೆ  

ಅವನ ನುಡಿ ಮಧುರ, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.


ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.


ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.


ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.


ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.


ನಾನು ನಿದ್ರೆಗೊಂಡಿದ್ದರೂ ನನ್ನ ಹೃದಯವು ಎಚ್ಚರಗೊಂಡಿತ್ತು. ಇಗೋ, ಎನ್ನಿನಿಯನು ಕದ ತಟ್ಟಿ, “ಪ್ರಿಯಳೇ, ಕಾಂತಳೇ, ಪಾರಿವಾಳವೇ, ನಿರ್ಮಲೆಯೇ, ಬಾಗಿಲು ತೆಗೆ! ನನ್ನ ತಲೆಯ ಮೇಲೆಲ್ಲಾ ಇಬ್ಬನಿಯು ಬಿದ್ದಿದೆ, ನನ್ನ ಕೂದಲು ರಾತ್ರಿ ಬೀಳುವ ಹನಿಗಳಿಂದ ತುಂಬಿದೆ” ಅಂದನು.


ಬಂಡೆಯ ಬಿರುಕುಗಳಲ್ಲಿಯೂ, ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ! ನಿನ್ನ ರೂಪವನ್ನು ನನಗೆ ತೋರಿಸು, ನಿನ್ನ ಧ್ವನಿಯನ್ನು ಕೇಳಿಸು; ಯಾಕೆಂದರೆ ನಿನ್ನ ಸ್ವರ ಎಷ್ಟೋ ಇಂಪು, ನಿನ್ನ ರೂಪವು ಎಷ್ಟೋ ಅಂದ.”


ಸವಿನುಡಿಯು ಜೇನುಕೊಡ, ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.


ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ. ಅದು ಗಂಟಲಿನೊಳಗೆ ಮೆಲ್ಲಗೆ ಇಳಿದುಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು