Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವಿನ ದಿನದಂದು ಪವಿತ್ರಾತ್ಮನು ನನ್ನನ್ನು ವಶಪಡಿಸಿಕೊಂಡನು. ಆಗ ನನ್ನ ಹಿಂಭಾಗದಲ್ಲಿ ಒಂದು ಮಹಾಶಬ್ದವನ್ನು ಕೇಳಿದೆನು. ಆ ಶಬ್ದವು ತುತೂರಿಯ ಧ್ವನಿಯಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಧನಿಯಾಚ್ಯಾ ದಿಸಿ ಮಿಯಾ ಪವಿತ್ರ್ ಆತ್ಮ್ಯಾನ್ ಭರ್‍ಲೊ, ಅನಿ ಮಾಕಾ ಎಕ್ ಮೊಟೊ ಧನ್ ಆಯ್ಕೊ ಯೆಲೊ, ತೊ ಅವಾಜ್ ಎಕ್ ಮೊಟ್ಯಾ ಪಂವ್ಯಾಚ್ಯಾ ಅವಾಜಾ ಸರ್ಕೊ ಯೆವ್‍ಲಾಗಲ್ಲೊ, ತೊ ಮಾಜ್ಯಾ ಫಾಟಿಕ್ಡೆ ಬೊಲುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:10
13 ತಿಳಿವುಗಳ ಹೋಲಿಕೆ  

ದೇವರಾತ್ಮನಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ಪರಲೋಕದೊಳಗಿಂದ, ದೇವರ ಬಳಿಯಿಂದ ಇಳಿದುಬರುವುದನ್ನು ನನಗೆ ತೋರಿಸಿದನು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರುಭೂಮಿಗೆ ಹೋದನು. ಅಲ್ಲಿ ನಾನು ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು. ಆ ಮೃಗದ ಮೈಮೇಲೆಲ್ಲಾ ದೂಷಣೆಗಳಿಂದ ಕೂಡಿದ್ದ ಹೆಸರುಗಳು ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.


ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,


ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು