Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಬಗಾ, ತೊ ಮೊಡಾಂಚ್ಯಾ ವರ್ತಿ ಯೆವ್‍ಲಾಲಾ! ಹರಿಎಕ್ಲೊ ತೆಕಾ ಬಗ್ತಾ, ತೆಕಾ ಭೊಚಲ್ಲೊ ಸೈತ್ ತೆಕಾ ಬಗ್ತಾ” ಹ್ಯಾ ಜಗಾತ್ನಿ ಸಗ್ಳಿ ಲೊಕಾ ತೆಕಾ ಲಾಗುನ್ ಮರಗ್ತ್ಯಾತ್, ಹೆ ಖರೆಚ್ ಖರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 1:7
36 ತಿಳಿವುಗಳ ಹೋಲಿಕೆ  

ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.


ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


“ಅವರು ತಾವು ಇರಿದವನನ್ನು ದೃಷ್ಟಿಸಿನೋಡುವರು” ಎಂದು ಧರ್ಮಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.


ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.


ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.


ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.


ಮತ್ತು ಆತನು ಸತ್ತವರೊಳಗಿಂದ ಎಬ್ಬಿಸಿದ, ಆಕಾಶದೊಳಗಿಂದ ಬರಲಿಕ್ಕಿರುವಂಥ ಆತನ ಕುಮಾರನನ್ನು ಕಾದುಕುಳಿತಿರುವಿರೆಂತಲೂ ಆ ಜನರೇ ಹೇಳುತ್ತಾರೆ. ಈ ಯೇಸು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.


ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.


ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


ದೇವರು ಎದ್ದು ಹೊರಡುವಾಗ, ಆತನ ವೈರಿಗಳು ಚದರಿಹೋಗಲಿ; ಆತನ ಹಗೆಗಾರರು ಆತನ ಎದುರಿನಿಂದ ಓಡಿಹೋಗಲಿ.


ಯೆಹೋವನ ಎಲ್ಲಾ ಶತ್ರುಗಳೂ ಹೀಗೆಯೇ ನಾಶವಾಗಲಿ. ಆತನನ್ನು ಪ್ರೀತಿಸುವ ಭಕ್ತರು ಪ್ರಕಾಶದಿಂದ ಉದಯಿಸುವ ಸೂರ್ಯನಂತಿರಲಿ.” ಅನಂತರ ದೇಶದಲ್ಲಿ ನಲವತ್ತು ವರ್ಷ ಸಮಾಧಾನವಿತ್ತು.


ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.


ಅವರಲ್ಲಿ ತಿರುಗಿ ಮಾನಸಾಂತರವನ್ನು ಹುಟ್ಟಿಸುವುದು ಅಸಾಧ್ಯ, ಯಾಕೆಂದರೆ ಅವರು ತಾವಾಗಿಯೇ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗವಾಗಿ ಅವಮಾನಪಡಿಸುವವರೂ ಆಗಿರುತ್ತಾರೆ.


ಮೆಗಿದ್ದೋವಿನ ತಗ್ಗಿನೊಳಗೆ ಹದದ್ ರಿಮ್ಮೋನಿನಲ್ಲಿ ಗೋಳಾಟವಾಗುವಂತೆ ಯೆರೂಸಲೇಮಿನಲ್ಲಿ ಆ ದಿನ ದೊಡ್ಡ ಗೋಳಾಟವಾಗುವುದು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು