Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ಮತ್ತೊಬ್ಬ ಬಲಿಷ್ಠನಾದ ದೇವದೂತನೊಬ್ಬನು ಪರಲೋಕದಿಂದ ಇಳಿದುಬರುವುದನ್ನು ನಾನು ನೋಡಿದೆನು. ಆ ದೇವದೂತನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಸುತ್ತಲೂ ಕಾಮನಬಿಲ್ಲಿತ್ತು. ಆ ದೇವದೂತನ ಮುಖವು ಸೂರ್ಯನಂತೆಯೂ ಅವನ ಕಾಲುಗಳು ಬೆಂಕಿಯ ಕಂಬಗಳಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಅನಿ ಎಕ್ ಮೊಟೊ ದೆವ್‍ದುತಾ ಸರ್ಗಾತ್ನಾ ಖಾಲ್ತಿ ಯೆತಲೊ ಮಿಯಾ ಬಗಟ್ಲೊ. ಎಕ್ ಮೊಡಾನ್ ತೆಕಾ ಲಪಟಲ್ಲೆ ಹೊತ್ತೆ ಅನಿ ತ್ಯೆಚ್ಯಾ ಟಕ್ಲ್ಯಾಚ್ಯಾ ಭೊತ್ಯಾನಿ ಕಾಮನ್‍ಬಿಲ್ಲ್ ಹೊತ್ತೆ; ತೆಚೆ ತೊಂಡ್ ದಿಸ್ ಸರ್ಕೆ ಹೊತ್ತೆ, ಅನಿ ತೆಚೆ ಡೊಕೆ ಆಗಿಚ್ಯಾ ಖಾಂಬ್ಯಾಂಚ್ಯಾ ಸರ್ಕೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:1
28 ತಿಳಿವುಗಳ ಹೋಲಿಕೆ  

ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.


ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.


ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.


ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.


ನೀರಿನ ಮೇಲೆ ತೊಳೆಗಳನ್ನು ನಿಲ್ಲಿಸಿ ಉಪ್ಪರಿಗೆಗಳನ್ನು ಕಟ್ಟಿಕೊಂಡು; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿರುವೆ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಮಧ್ಯಾಹ್ನದ ಹೊತ್ತಿನಲ್ಲಿ ಪರಲೋಕದಿಂದ ಒಂದು ಬೆಳಕು ನನ್ನ ಸುತ್ತಲೂ ಮತ್ತು ನನ್ನ ಜೊತೆಯಲ್ಲಿ ಪ್ರಯಾಣಮಾಡುತ್ತಿದ್ದವರ ಸುತ್ತಲೂ ಸೂರ್ಯನ ಹೊಳಪಿಗಿಂತ ಹೆಚ್ಚಾಗಿ ಹೊಳೆಯುವುದನ್ನು ನಾನು ಕಂಡೆನು.


ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.


“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ಮತ್ತು ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು