Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 11:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಶ್ವಾಸವು ಬಂದು ಆ ಶವಗಳಲ್ಲಿ ಪ್ರವೇಶಿಸಲು, ಅವರು ಕಾಲೂರಿ ನಿಲ್ಲುವರು. ಅವರನ್ನು ನೋಡಿದವರೆಲ್ಲರೂ ಭಯದಿಂದ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಮೂರುವರೆ ದಿನಗಳ ನಂತರ ದೇವರು ಆ ಇಬ್ಬರು ಪ್ರವಾದಿಗಳೊಳಗೆ ಮತ್ತೆ ಜೀವ ಪ್ರವೇಶಿಸುವಂತೆ ಮಾಡಿದನು. ಆಗ ಅವರು ತಮ್ಮ ಕಾಲೂರಿ ನಿಂತುಕೊಂಡರು. ಅವರನ್ನು ನೋಡಿದ ಜನರೆಲ್ಲರೂ ಭಯಗ್ರಸ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಾಡೆ ತಿನ್ ದಿಸಾಚ್ಯಾ ಮಾನಾ ಎಕ್ ಜಿವ್-ದಿತಲೊ ಸ್ವಾಸ್ ದೆವಾಕ್ನಾ ಯೆಲೊ, ತೆಂಚ್ಯಾ ಭುತ್ತುರ್ ಗುಸ್ಲೊ, ಅನಿ ತೆನಿ ಉಟುನ್ ಅಪ್ಲ್ಯಾ ಪಾಯಾವೈರ್ ಇಬೆ ರ್‍ಹಾಲೆ ತೆಂಕಾ ಬಗಟಲ್ಲೆ ಸಗ್ಳೆಜನಾ ಭಿಂಯಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 11:11
11 ತಿಳಿವುಗಳ ಹೋಲಿಕೆ  

ಹೀಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಸಕಲ ಜನ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳವರೆಗೂ ನೋಡುವರು ಮತ್ತು ಅವರ ಶವಗಳನ್ನು ಸಮಾಧಿಯಲ್ಲಿ ಇಡಗೊಡಿಸುವುದಿಲ್ಲ.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.


“ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆಂದು ನಾನು ಬಲ್ಲೆನು. ನಿಮ್ಮ ವಿಷಯದಲ್ಲಿ ನಮಗೆ ಮಹಾಭಯವುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು