Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪರಲೋಕದಲ್ಲಿ ಒಂದು ಮಹಾ ಚಿಹ್ನೆಯು ಕಾಣಿಸಿತು. ಸ್ತ್ರೀಯೊಬ್ಬಳು ಸೂರ್ಯಭೂಶಿತಳಾಗಿದ್ದಳು. ಆಕೆಯ ಪಾದದಡಿಯಲ್ಲಿ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳಿಂದ ಮಾಡಿದ್ದ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು. ಸೂರ್ಯನನ್ನು ಧರಿಸಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆಕೆಯ ಪಾದದ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಮಳ್ಬಾ ವರ್ತಿ ಎಕ್ ಮೊಟಿ ವಳಕ್ ದಿಸ್ಲಿ, ಎಕ್ ಬಾಯ್ಕೊಮನುಸ್ ಹೊತ್ತಿ ತೆನಿ ದಿಸ್ ನೆಸಲ್ಲಿನ್, ಅನಿ ಬಾರಾ ಚಿಕ್ಕಿಯಾಂಚೊ ಮುಕುಟ್ ತಿಚ್ಯಾ ಟಕ್ಲ್ಯಾ ವರ್ತಿ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:1
35 ತಿಳಿವುಗಳ ಹೋಲಿಕೆ  

“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.


ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ.


ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’


ಅರುಣೋದಯದಂತೆ ಉದಯಿಸುವಂತಿರುವಳು, ಚಂದ್ರನಂತೆ ಸೌಮ್ಯ ಸುಂದರಿಯಿವಳು, ಸೂರ್ಯನಂತೆ ಶುಭ್ರಳು, ಧ್ವಜಗಳುಳ್ಳ ಸೈನ್ಯದ ಹಾಗೆ ಭಯಂಕರಳು ಆಗಿರುವ ಇವಳಾರು?


ಮತ್ತು ಮಹಾಭೂಕಂಪಗಳಾಗುವವು, ಅಲ್ಲಲ್ಲಿ ಬರಗಳೂ ಉಪದ್ರವಗಳೂ ಬರುವವು, ಭಯಾನಕ ಘಟನೆಗಳೂ ಮಹಾ ಸೂಚನೆಗಳೂ ಆಕಾಶದಲ್ಲಿ ತೋರುವವು.


ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು


ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.


ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ನಾನು ನೋಡಿದೆನು. ಏಳು ಮಂದಿ ದೇವದೂತರ ಕೈಯಲ್ಲಿ ಏಳು ಉಪದ್ರವಗಳಿದ್ದವು, ಇವು ಕಡೇ ಉಪದ್ರವಗಳು. ಇವುಗಳೊಂದಿಗೆ ದೇವರ ರೌದ್ರವು ಸಂಪೂರ್ಣವಾಗುವುದು.


ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು. ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ, ಗರ್ಜನೆ, ಗುಡುಗು, ಮಿಂಚುಗಳು, ಭೂಕಂಪವು, ದೊಡ್ಡ ಆಲಿಕಲ್ಲಿನ ಮಳೆಯೂ ಸುರಿಯಿತು.


ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.


ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ಆಗ ಶಾಸ್ತ್ರಿಗಳಲ್ಲಿಯೂ ಫರಿಸಾಯರಲ್ಲಿಯೂ ಕೆಲವರು, “ಬೋಧಕನೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ನೋಡಬೇಕೆಂದು” ಯೇಸುವನ್ನು ಕೇಳಿದರು. ಅದಕ್ಕೆ ಆತನು ಅವರಿಗೆ ಉತ್ತರಕೊಟ್ಟದ್ದೇನಂದರೆ,


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ಯಾಕೆಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿಸಿದ್ದೇನಲ್ಲ.


ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.


ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮಗೆ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು