Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತ್ಯಾ ಭಯಾನಕ್ ಸಾಪಾಕ್ ಭಾಯ್ರ್ ಕಾಡುನ್ ಟಾಕುನ್ ಹೊತಾ, ಅದ್ಲ್ಯಾ ಕಾಲಾತ್ಲೊ ಸಾಪ್ ತೊ, ತೆಚೆ ನಾಂವ್ ಗಿರೊ ನಾಹೊಲ್ಯಾರ್ ಸೈತಾನ್. ತೆನಿ ಸಗ್ಳ್ಯಾ ಜಗಾಕ್ ಪಸ್ವುಲ್ಯಾನಾಯ್ ತೆಕಾ ಅನಿ ತ್ಯೆಚ್ಯಾ ಸಗ್ಳ್ಯಾ ದುತಾಕ್ನಿ ಜಿಮ್ನಿ ವರ್ತಿ ಟಾಕುನ್ ಹೊಲ್ಲೆ ಹಾಯ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 12:9
68 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.


ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.


ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!


ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.


ಪರಲೋಕದಲ್ಲಿ ಯುದ್ಧ ನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪದ ವಿರುದ್ಧ ಯುದ್ಧ ಮಾಡಿದರು. ಘಟಸರ್ಪವೂ ಅವನ ದೂತರೂ ಯುದ್ಧ ಮಾಡಿ ಕಾದಾಡಿದರು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.


ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.


ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.


ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.


“ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು. ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.


ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.


ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,


ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


“ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,


ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸೈತಾನನು ಬಂದು ಅವರು ನಂಬಿ ರಕ್ಷಣೆ ಹೊಂದಬಾರದೆಂದು ವಾಕ್ಯವನ್ನು ಅವರ ಹೃದಯದಿಂದ ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿದ್ದಿರುವ ಬೀಜಗಳು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,


ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.


ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.


ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


ಇದಲ್ಲದೆ ಮಕ್ಕಳು ರಕ್ತ ಮಾಂಸಧಾರಿಗಳು ಆಗಿರುವುದರಿಂದ ಯೇಸು ಸಹ ಅವರಂತೆಯೇ ಆದನು. ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶಮಾಡುವುದಕ್ಕೂ,


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.


ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?


ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.


ಇನ್ನು ಮೇಲೆ ನಾನು ನಿಮ್ಮ ಜೊತೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕಾಧಿಪತಿಯು ಬರಲಿದ್ದಾನೆ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.


ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.


ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


“‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸದು. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಬರದು. ನಿನ್ನ ವರ್ತಕರು ಭೂಮಿಯ ಮೇಲೆ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದ ಶಕ್ತಿಯಿಂದ ಎಲ್ಲಾ ದೇಶದವರು ವಂಚಿಸಲ್ಪಟ್ಟರು.


ದುಷ್ಟ ಅಧಿಕಾರಿಯನ್ನು ಅವರ ಮೇಲೆ ನೇಮಿಸು; ತಪ್ಪು ಹೊರಿಸುವವನನ್ನು ಅವನ ಬಲಗಡೆಯಲ್ಲಿ ನಿಲ್ಲಿಸು.


ಆದರೆ ಘಟಸರ್ಪಕ್ಕೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ ಅದು ಸೋಲನ್ನಪ್ಪಿತು. ಹೀಗೆ ಪರಲೋಕದಲ್ಲಿ ಅವರಿಗೂ ಸ್ಥಳವಿಲ್ಲದಂತಾಯಿತು.


ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಆದರೆ ಭೂಮಿ, ಸಮುದ್ರಗಳೇ ನಿಮ್ಮ ದುರ್ಗತಿಯನ್ನು ಏನೆಂದು ಹೇಳಲಿ ಏಕೆಂದರೆ ಸೈತಾನನು ತನಗಿರುವ ಕಾಲವು ಇನ್ನು ಸ್ವಲ್ಪಮಾತ್ರವೆಂದು ತಿಳಿದು ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ” ಎಂಬುದಾಗಿ ಹೇಳಿತು.


ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು