ಪ್ರಕಟನೆ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
16 ಈ ಎರಡನೆಯ ಮೃಗವು, ದೊಡ್ಡವರು, ಚಿಕ್ಕವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ದಾಸರು ಎಲ್ಲರೂ ತಮ್ಮತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತನ್ನು ಹೊಂದಬೇಕೆಂದು ಒತ್ತಾಯ ಮಾಡಿತ್ತು.
16 ಎರಡನೆಯ ಮೃಗವು ಸಹ ಎಲ್ಲರನ್ನು ಅಂದರೆ ಚಿಕ್ಕವರನ್ನು, ದೊಡ್ಡವರನ್ನು, ಶ್ರೀಮಂತರನ್ನು, ಬಡವರನ್ನು, ಗುಲಾಮರನ್ನು ಮತ್ತು ಸ್ವತಂತ್ರರನ್ನು, ತಮ್ಮ ಬಲಗೈಯ ಮೇಲಾಗಲಿ ಅಥವಾ ತಮ್ಮ ಹಣೆಗಳ ಮೇಲಾಗಲಿ ಗುರುತು ಹಾಕಿಕೊಳ್ಳಬೇಕೆಂದು ಒತ್ತಾಯಪಡಿಸಿತು.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.
ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.
ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.
ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.
ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.
ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.
ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.
ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.