Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೋಕದಲ್ಲಿ ವಾಸಿಸುವ ಜನರೆಲ್ಲರೂ ಆ ಮೃಗವನ್ನು ಆರಾಧಿಸುತ್ತಾರೆ. ಲೋಕವು ಆರಂಭಗೊಂಡಂದಿನಿಂದಲೂ ಕೊಲ್ಲಲ್ಪಟ್ಟ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರ ಹೆಸರುಗಳನ್ನು ಬರೆದಿಲ್ಲವೋ ಅವರೇ ಈ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಿವಾನಿ ಮಾರಲ್ಲ್ಯಾ ಬೊಕ್ಡಾಕ್ ಸಮಂದ್ ಪಡಲ್ಲ್ಯಾ ಜಿವಾಚ್ಯಾ ಪುಸ್ತಕಾತ್ ಜಗ್ ರಚುಚ್ಯಾ ಅದ್ದಿ ಕೊನಾಚಿ ನಾವಾ ಲಿವಲ್ಲಿ ನಾತ್, ತೆನಿ ಸಗ್ಳಿ ಜಿಮ್ನಿ ವೈಲಿ ಲೊಕಾ ತ್ಯಾ ಭಯಾನಕ್ ಜನಾವರಾಕ್ ಆರಾದನ್ ಕರ್‍ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:8
25 ತಿಳಿವುಗಳ ಹೋಲಿಕೆ  

ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.


ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.


ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ.


ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.


ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.


ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ.


ಆದರೂ ನೀನು ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀನು ಬರೆದಿರುವ ಜೀವಿತರ ಪುಸ್ತಕದಿಂದ ನನ್ನ ಹೆಸರನ್ನೂ ಅಳಿಸಿಬಿಡಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಪ್ರಾರ್ಥಿಸಿದನು.


ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಸುರಿಸಿದನು.


ಹೋಗುವಾಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆಯಲು ಅಬ್ರಹಾಮನು, “ಏನು ಮಗನೇ” ಎಂದನು. ಇಸಾಕನು, “ಇಗೋ, ಬೆಂಕಿಯೂ ಕಟ್ಟಿಗೆಯೂ ಉಂಟು; ಆದರೆ ಹೋಮಕ್ಕೆ ಬೇಕಾದ ಕುರಿ ಎಲ್ಲಿ” ಎಂದು ಕೇಳಿದ್ದಕ್ಕೆ,


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆದು ಹಾಕು, ಸದ್ಭಕ್ತರ ಹೆಸರಿನ ಸಂಗಡ ಅವರ ಹೆಸರು ಬರೆಯಲ್ಪಡದಿರಲಿ.


ಇದಲ್ಲದೆ ಆಕಾಶದಲ್ಲಿಯೂ, ಭೂಮಿಯ ಮೇಲೆಯೂ, ಭೂಮಿಯ ಕೆಳಗಡೆಯೂ, ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಅಂದರೆ ಭೂಮ್ಯಾಕಾಶ ಸಮುದ್ರಗಳೊಳಗೆ ಇರುವುದೆಲ್ಲವೂ, “ಸಿಂಹಾಸನದ ಮೇಲೆ ಕುಳಿತಿದ್ದಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರ, ಗೌರವ, ಮಹಿಮೆ, ಅಧಿಪತ್ಯಗಳು ಯುಗಯುಗಾಂತರಗಳಲ್ಲಿಯೂ ಇರಲಿ” ಎಂದು ಹೇಳುವುದನ್ನು ಕೇಳಿದೆನು.


ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು.


ಈ ಮೃಗವು ಮೊದಲನೆಯ ಮೃಗದ ಎದುರು ತನ್ನ ಅಧಿಕಾರವನ್ನೆಲ್ಲಾ ನಡೆಸಿ, ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು