Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಬೊಕ್ಡು ಸಿಯೊನ್ ಮಡ್ಡಿ ವರ್ತಿ ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯೆಚ್ಯಾ ವಾಂಗ್ಡಾ ತೆಚೆ ಅನಿ ತ್ಯೆಚ್ಯಾ ಬಾಬಾಚೆ ನಾಂವ್ ಕಪಾಳಾ ವರ್ತಿ ಲಿವಲ್ಲಿ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಇಬೆ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:1
30 ತಿಳಿವುಗಳ ಹೋಲಿಕೆ  

ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”


ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.


ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.


ಇದಾದ ನಂತರ ನಾನು ನೋಡಿದಾಗ ಪರಲೋಕದಲ್ಲಿರುವ ದೇವದರ್ಶನ ಗುಡಾರದ ಪವಿತ್ರ ಸ್ಥಾನವು ತೆರೆಯಲ್ಪಟ್ಟಿತು.


ಚೀಯೋನ್ ನಗರಿಯಾದರೋ, “ಯೆಹೋವನು ನನ್ನನ್ನು ಕೈಬಿಟ್ಟಿದ್ದಾನೆ, ಕರ್ತನು ನನ್ನನ್ನು ಮರೆತಿದ್ದಾನೆ” ಎಂದುಕೊಂಡಳು.


ಆಗ ನಾನು ನೋಡಲು ಇಗೋ, ನಸು ಹಸಿರು ಬಣ್ಣದ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು ಮೃತ್ಯು ಎಂದು. ಮೃತ್ಯುಲೋಕ ಅವನನ್ನು ಹಿಂಬಾಲಿಸುತ್ತಿತ್ತು. ಅವನಿಗೆ ಭೂಮಿಯ ನಾಲ್ಕನೇ ಒಂದು ಭಾಗವನ್ನು ಕತ್ತಿಯಿಂದಲೂ, ಕ್ಷಾಮದಿಂದಲೂ, ಅಂಟುರೋಗದಿಂದಲೂ, ಭೂಮಿಯ ಕಾಡುಮೃಗಗಳಿಂದಲೂ ಕೊಂದುಹಾಕುವುದಕ್ಕೆ ಅಧಿಕಾರ ಕೊಡಲಾಗಿತ್ತು.


ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.


“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆತನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು, ನಾನು ಅದಕ್ಕೆ, “ಮಾಗಿದ ಹಣ್ಣಿನ ಪುಟ್ಟಿ” ಎಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು, “ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ. ಇನ್ನು ಮೇಲೆ ನಾನು ಅವರನ್ನು ಉಳಿಸುವುದಿಲ್ಲ.


ಕೂಡಲೆ ದಾನಿಯೇಲನಾದ ನಾನು ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.


ಬಳಿಕ ಆ ಪುರುಷನು ಉತ್ತರದಿಕ್ಕಿನ ಹೆಬ್ಬಾಗಿಲಿನ ಮಾರ್ಗವಾಗಿ ನನ್ನನ್ನು ಆಲಯದ ಮುಂದೆ ಕರೆದುಕೊಂಡು ತಂದನು; ಆಹಾ, ನಾನು ನೋಡಿದ ಯೆಹೋವನ ಮಹಿಮೆಯೂ, ಯೆಹೋವನ ಆಲಯವನ್ನು ತುಂಬಿಕೊಂಡಿತು. ಅದನ್ನು ನೋಡಿ ನಾನು ಬೋರಲು ಬಿದ್ದೆನು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.


ಇಗೋ, ನಾನು ನೋಡುತ್ತಿರಲಾಗಿ ಒಂದು ಕೈ ನನ್ನ ಕಡೆಗೆ ಚಾಚಿತ್ತು, ಇಗೋ ಅದರಲ್ಲಿ ಗ್ರಂಥದ ಸುರುಳಿಯು ಕಾಣಿಸಿತು.


ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.


ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.


ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಅವರು ಆತನ ಮುಖವನ್ನು ನೋಡುವರು. ಅವರ ಹಣೆಯ ಮೇಲೆ ಆತನ ಹೆಸರು ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು