Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 14:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿಬಿ ದೆವಾಚ್ಯಾ ಮೊಟ್ಯಾ ರಾಗಾಚ್ಯಾ ಆಯ್ದಾನಾತ್ಲೆ ವಾಯ್ನ್ ಫಿತ್ಯಾತ್! ದೆವಾಚೊ ರಾಗ್ ಮನ್ತಲ್ಯಾ ಆಯ್ದಾನಾತ್ ತೊ ವಾಯ್ನ್ ಪುರಾ ತಾಕ್ತಿನ್ ವೊತುನ್ ಹೊಲಾ, ಹೆ ಸಗ್ಳೆ ಕರಲ್ಲೆ ಸಗ್ಳೆ ಜಾನಾ ಪವಿತ್ರ್ ದೆವ್‍ದುತಾಂಚ್ಯಾ ಅನಿ ಬೊಕ್ಡಾಚ್ಯಾ ಇದ್ರಾಕ್ ಆಗಿತ್ ಅನಿ ಗಂದಕಾತ್ ತರಾಸ್ ಕರುನ್ ಘೆತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 14:10
45 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ಆತನು ದುಷ್ಟರ ಮೇಲೆ ಬೆಂಕಿ ಗಂಧಕಗಳನ್ನು ಸುರಿಸಲಿ. ಉರಿಗಾಳಿಗಳನ್ನು ಅವರಿಗೆ ಪಾನವಾಗಮಾಡಲಿ.


ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವನು ತನ್ನ ನಾಶವನ್ನು ಕಣ್ಣಾರೆ ಕಾಣಲಿ, ಸರ್ವಶಕ್ತನಾದ ದೇವರ ರೌದ್ರರಸವನ್ನು ಪಾನಮಾಡಲಿ.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ


ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.


ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.


ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬುದು ಸಕಲ ನರಪ್ರಾಣಿಗಳಿಗೂ ಗೋಚರವಾಗುವುದು; ಅದು ಆರಿಹೋಗದು.’


ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”


ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು.


ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ! ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರುವ ಮಟ್ಟಿಗೆ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನೆಂಬ ಹೆಸರಿನ ರಾಜಾಧಿರಾಜನು ಅನ್ನುತ್ತಾನೆ.”


ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.


ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.


ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.


ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.


ಅವನ ಸಂಬಂಧಿಕರಲ್ಲದವರು ಅವನ ಗುಡಾರದಲ್ಲಿ ವಾಸಿಸುವರು, ಅವನ ಮನೆಯ ಮೇಲೆ ಗಂಧಕವು ಎರಚಲ್ಪಡುವುದು.


ಆದುದರಿಂದ ಜನರು ಅವರ ಪಕ್ಷವನ್ನು ಹಿಡಿಯುತ್ತಾರೆ; ಅವರು ಅವರಲ್ಲಿ ಯಾವುದೇ ತಪ್ಪನ್ನು ಕಂಡುಹಿಡಿಯಲಿಲ್ಲ.


ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,


ನಾನು ಗೋಗನ ಸಂಗಡ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ, ಸಾವಿಗೂ ಗುರಿಮಾಡಿ, ನಾನು ಅವನ ಮೇಲೆಯೂ, ಅವನ ದಂಡುಗಳ ಮೇಲೆಯೂ, ಅವನೊಂದಿಗಿರುವ ಅನೇಕ ಜನಾಂಗಗಳ ಮೇಲೆಯೂ ವಿಪರೀತ ಮಳೆ, ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ಯೇಸು ಕರ್ತನು ತನ್ನ ಶಕ್ತಿಯುತ ದೇವದೂತರೊಂದಿಗೆ ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.


ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು.


ಜನಾಂಗಗಳನ್ನು ಕತ್ತರಿಸಿಹಾಕುವುದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಟು ಬರುತ್ತದೆ. ಆತನು ಅವರನ್ನು ಕಬ್ಬಿಣದ ದಂಡದಿಂದ ಆಳುವನು. ಅವನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು