Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಸಾವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ಮೊಟ್ಯಾ ಯುಪ್ರೆಟಿಸ್ ಮನುನ್ ಬಲ್ವುತಲ್ಯಾ ನ್ಹಯ್ ವರ್ತಿ ವೊತ್ಲ್ಯಾನ್. ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಯೆತಲ್ಯಾ ರಾಜಾಕ್ನಿ ವಾಟ್ ಕರುನ್ ದಿವ್‍ಸಾಟ್ನಿ ತಿ ನ್ಹಯ್ ಅಟುನ್ ವಾಳುನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:12
15 ತಿಳಿವುಗಳ ಹೋಲಿಕೆ  

ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.


ಆದ್ದರಿಂದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನು ನಿನ್ನ ಪರವಾಗಿ ವ್ಯಾಜ್ಯವಾಡಿ, ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ, ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ.


ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು.


ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶಮಾಡುವನು. ಯೂಫ್ರೆಟಿಸ್ ನದಿಯ ಮೇಲೆ ಕೈ ಜಾಡಿಸಿ, ತನ್ನ ಬಿಸಿಗಾಳಿಯಿಂದ ಅದನ್ನು ಏಳು ನದಿಗಳನ್ನಾಗಿ ಒಡೆದು, ಜನರ ಪಾದರಕ್ಷೆಗಳು ನೆನೆಯದಂತೆ ಅವರನ್ನು ದಾಟಿಸುವನು.


ಇನ್ನೂ ಆ ದೇವದೂತನು ನನಗೆ ಹೇಳಿದ್ದೇನಂದರೆ, “ಆ ಜಾರಸ್ತ್ರೀ ಕುಳಿತ್ತಿದ್ದ ನೀರನ್ನು ನೀನು ನೋಡಿದೆಯಲ್ಲ, ಅವು ಜನಾಂಗಳನ್ನು, ಜನ ಸಮೂಹಗಳನ್ನು, ರಾಷ್ಟ್ರಗಳನ್ನು, ಭಾಷೆಗಳನ್ನು ಸೂಚಿಸುತ್ತದೆ ಎಂದನು.


ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,


ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ಎರಡನೆಯ ವಿಪತ್ತು ಕಳೆದುಹೋಯಿತು. ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತಿದೆ.


ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು