Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವು ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದ ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಅಶುದ್ಧಾತ್ಮಗಳು ಸೈತಾನನ ಆತ್ಮಗಳಾಗಿವೆ. ಅವುಗಳಿಗೆ ಮಹಾ ಅದ್ಭುತಗಳನ್ನು ಮಾಡಲು ಶಕ್ತಿಯಿದೆ. ಈ ಅಶುದ್ಧಾತ್ಮಗಳು ಸರ್ವಶಕ್ತನಾದ ದೇವರ ಮಹಾದಿನದಂದು ನಡೆಯುವ ಯುದ್ಧಕ್ಕೆ, ಲೋಕದಲ್ಲೆಲ್ಲಾ ಇರುವ ರಾಜರನ್ನು ಒಟ್ಟುಗೂಡಿಸಲು ಹೊರಗೆ ಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆ ಗಿರ್‍ಯಾಂಚೆ ಆತ್ಮೊ ಮೊಟಿ ವಿಚಿತ್ರ್ ಕಾಮಾ ಕರಿತ್. ತೆ ತಿನಿಬಿ ಆತ್ಮೊ ಭಾಯ್ರ್ ಜಾವ್ನ್ ಜಗಾತ್ಲ್ಯಾ ಸಗ್ಳ್ಯಾ ರಾಜಾಕ್ನಿ ಸಗ್ಳ್ಯಾಕ್ನಿ ದೆವಾಚ್ಯಾ ತ್ಯಾ ಮೊಟ್ಯಾ ದಿಸಾಚ್ಯಾ ಝಗ್ಡ್ಯಾಕ್ ಮನುನ್ ಗೊಳಾ ಕರುನ್ ಹಾನಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:14
33 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಮರಿಯಾದಾತನಿಗೆ ವಿರುದ್ಧವಾಗಿ ಯುದ್ಧ ಮಾಡುವರು. ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವುದರಿಂದ ಕುರಿಮರಿಯು ಅವರನ್ನು ಜಯಿಸುವನು ಮತ್ತು ದೇವರು ಕರೆದವರೂ, ದೇವರು ಆದುಕೊಂಡವರೂ, ನಂಬಿಗಸ್ತರೂ ಆಗಿರುವ ಆತನವರು ಕುರಿಮರಿಯೊಂದಿಗೆ ಜಯದಲ್ಲಿ ಪಾಲುಗಾರರಾಗುವರು.”


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.


ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.


ಅದು ಮೇಲಿಂದ ಬಂದ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು, ಲೌಕಿಕವಾದುದು, ದೆವ್ವಗಳಿಗೆ ಸಂಬಂಧಪಟ್ಟದ್ದು.


ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,


ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.


ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.


ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.


ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಈ ಎಲ್ಲಾ ಅರಸರು ಒಟ್ಟಾಗಿ ಸೇರಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವುದಕ್ಕಾಗಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು