Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾನಾ ತಿನ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ನ್ಹಯಾಂಚ್ಯಾ ವರ್ತಿ ಅನಿ ಪಾನಿಯಾಂಚ್ಯಾ ಝರ್‍ಯಾಂಚ್ಯಾ ವರ್ತಿ ವೊತ್ಲ್ಯಾನ್. ತನ್ನಾ ತೆ ಸಗ್ಳೆ ರಗಾತ್ ಹೊವ್ನ್ ಬದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:4
10 ತಿಳಿವುಗಳ ಹೋಲಿಕೆ  

ಆ ಮೇಲೆ ಜಲಾಧಿಪತಿಯಾದ ದೂತನು, “ನೀನು ಇರುವಾತನೂ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ.


ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಯೆಹೋವನು ಪುನಃ ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ನಿನ್ನ ಕೋಲನ್ನು ಹಿಡಿದುಕೊಂಡು ಹೊಳೆ, ಕಾಲುವೆ, ಕೆರೆ ಇವುಗಳ ಮೇಲೆ ಅದನ್ನು ಹಿಡಿದುಕೊಂಡು ಕೈಯನ್ನು ಚಾಚು. ಆಗ ಐಗುಪ್ತ ದೇಶದ ಮೇಲೆಲ್ಲಾ ಕಪ್ಪೆಗಳು ಬರುವವು” ಎಂದು ಹೇಳಬೇಕು ಎಂದನು.


ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.


ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.


ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು