Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮೇಲೆ ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಜ್ಞವೇದಿಕೆಯಿಂದ ಹೀಗೆ ಹೇಳುವುದನ್ನೂ ನಾನು ಕೇಳಿಸಿಕೊಂಡೆನು: “ಹೌದು, ದೇವರಾದ ಪ್ರಭುವೇ, ಸರ್ವಶಕ್ತನೇ, ನಿನ್ನ ತೀರ್ಪುಗಳೆಲ್ಲಾ ಸತ್ಯವಾಗಿವೆ ಮತ್ತು ನ್ಯಾಯವಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಮಾನಾ ಆಲ್ತಾರಿಕ್ನಾ ಮಿಯಾ ಎಕ್ ಅವಾಜ್ ಆಯಿಕ್ಲೊ, ತೊ, “ಸರ್ವೆಸ್ವರಾ ಸಗ್ಳ್ಯಾನಿಕಿ ದೆವಾ! ತಿಯಾ ಕರಲ್ಲ್ಯಾ ನಿರ್ನಯಾತ್ನಿ ನ್ಯಾಯ್ ಅನಿ ಖರೆ ಹಾಯ್!” ಮನುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:7
11 ತಿಳಿವುಗಳ ಹೋಲಿಕೆ  

ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.


ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,


ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.


ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು, ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯುವನು. ಇದರಲ್ಲಿ ದೇವಜನರಿಗೆ ತಾಳ್ಮೆಯೂ ನಂಬಿಕೆಯೂ ಅಗತ್ಯವಾಗಿರಬೇಕಾಗಿದೆ.


ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.


ಆತನು ನಾರಿನ ಬಟ್ಟೆಯನ್ನು ಹೊದ್ದುಕೊಂಡ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಗಳ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯದೊಳಗಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ, ತಂದು ಅದನ್ನು ಪಟ್ಟಣದ ಮೇಲೆ ಎರಚು” ಎಂದು ಅಪ್ಪಣೆಕೊಡಲು ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು