Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವಳ ಹಣೆಯ ಮೇಲೆ, “ಮಹತ್ತಾದ ಬಾಬೆಲೆಂಬ ಭೂಮಿಯಲ್ಲಿರುವ ಜಾರಸ್ತ್ರೀಯರ ಅಸಹ್ಯವಾದ ಕಾರ್ಯಗಳ ಮಾತೆ” ಎಂಬ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿಚ್ಯಾ ಕಪಾಳಾ ವರ್ತಿ ನಾವ್ ಲಿವಲ್ಲೆ ಹೊತ್ತೆ ತೆಚೊ ಘುಟಾಚೊ ಅರ್ಥ್ ಕಾಯ್ ಮಟ್ಲ್ಯಾರ್; “ಮೊಟ್ಯಾ ಬಾಬಿಲೊನ್ ಜಗಾತ್ಲ್ಯಾ ಸಗ್ಳ್ಯಾ ವ್ಯೆಭಿಚಾರ್ ಕರ್ತಲ್ಯಾಂಚ್ಯಾ ಅನಿ ವಾಯ್ಟ್ ಕರ್ತಲ್ಯಾಂಚ್ಯಾ ಬಾಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:5
18 ತಿಳಿವುಗಳ ಹೋಲಿಕೆ  

ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.


ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು.


ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ ಗೂಢಾರ್ಥವನ್ನು ನಾನು ನಿನಗೆ ವಿವರಿಸುತ್ತೇನೆ.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,


ಮಹಾ ಪಟ್ಟಣವು ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು.


ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಸಾಂಕೇತಿಕವಾಗಿ ಸೊದೋಮ್ ಎಂದು, ಐಗುಪ್ತ ಎಂದೂ ಹೆಸರುಗಳುಂಟು. ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟಿದ್ದನು.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ ದೂತರು, ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.”


ಏಳು ಬಟ್ಟಲುಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು, “ಬಾ, ಬಹಳ ನೀರುಗಳ ಮೇಲೆ ಕುಳಿತ್ತಿರುವ ಮಹಾ ಜಾರಸ್ತ್ರೀಗೆ ಆಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು ಮತ್ತು ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ನನಗೆ ಹೇಳಿದನು.


ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು