Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆ ವರ್ತಕರು ದಾಲ್ಚಿನ್ನಿ, ಸಾಂಬಾರ ಪದಾರ್ಥಗಳು, ಧೂಪ, ಪರಿಮಳತೈಲ, ಸಾಂಬ್ರಾಣಿ, ದ್ರಾಕ್ಷಾರಸ ಮತ್ತು ಆಲಿವ್‌ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು, ಕುರಿ, ಕುದುರೆಗಳು, ರಥಗಳು, ಗುಲಾಮರು ಮತ್ತು ಮಾನವ ಪ್ರಾಣಗಳನ್ನು ಮಾರುತ್ತಾರೆ. ವರ್ತಕರು ಅಳುತ್ತಾ ಹೀಗೆ ಹೇಳುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದಾಲ್ಚಿನಿ, ಮಸಾಲೊ, ಧುಪ್, ರಗಾತ್‍ಬೊಳ್, ಬರಿ ವಾಸ್ ಯೆತಲಿ ತೆಲಾ, ಬರಿ ವಾಸ್ ಯೆತಲೊ ಸಾಂಬಾರ್, ಅನಿ, ವಾಯ್ನ್ ಅನಿ ಜೈತುನಾಚೆ ತೆಲ್, ದಳಲ್ಲೆ ಪಿಟ್ಟ್ ಅನಿ ಘವ್; ಗೊರಾ, ಬಕ್ರಿ, ಘೊಡ್ಕಿ ಅನಿ ರಥಾ ಮಾನ್ಸಾಕ್ ಸೈತ್ ಗುಲಾಮ್ ಕರುನ್ ತೆಂಚೆಕ್ನಾ ಇಕಾತ್ ಘೆಯ್ನ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:13
25 ತಿಳಿವುಗಳ ಹೋಲಿಕೆ  

ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.


ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲರು ಮೂರು ದ್ರೋಹಗಳನ್ನು, ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಇಸ್ರಾಯೇಲರು ನ್ಯಾಯವಂತನನ್ನು ಬೆಳ್ಳಿಗೆ, ಒಂದು ಜೊತೆ ಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ಮಾರಿದರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


ದಿಕ್ಕಿಲ್ಲದವರನ್ನು ತುಳಿದು ಬಿಡುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ!


ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.


ನಾನೆದ್ದು ನನ್ನ ನಲ್ಲನಿಗೆ ಬಾಗಿಲು ತೆರೆಯಲು ಅಗುಳಿಯ ಮೇಲೆ ಕೈಯಿಟ್ಟೆನು, ನನ್ನ ಕೈಗಳಿಂದ ರಕ್ತಬೋಳವು, ನನ್ನ ಬೆರಳುಗಳಿಂದ ಅಚ್ಚರಕ್ತಬೋಳವು ತೊಟ್ಟಿಕ್ಕಿತು.


ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ ಇವುಗಳ ಚೂರ್ಣಗಳಿಂದ ಸುವಾಸನೆಗೊಳಿಸಿದ್ದೇನೆ.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.


ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.


ನೀವು ಐಗುಪ್ತದೇಶವನ್ನು ತಿರುಗಿ ಎಂದಿಗೂ ನೋಡುವುದಿಲ್ಲವೆಂದು ಯೆಹೋವನು ಹೇಳಿದ್ದರೂ ಆತನು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗ ಮಾಡುವನು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನು ದಾಸದಾಸಿಯರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.


ಈ ಯುದ್ಧದಲ್ಲಿ ಅವರ ಹಿಂಡುಗಳನ್ನು ಅಂದರೆ, ಐವತ್ತು ಸಾವಿರ ಒಂಟೆಗಳು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳೂ, ಎರಡು ಸಾವಿರ ಕತ್ತೆಗಳು ಮತ್ತು ಒಂದು ಲಕ್ಷ ಜನರನ್ನೂ ಕೊಳ್ಳೆಹಿಡಿದರು.


ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?


‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’


ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ದೂರದಲ್ಲಿ ನಿಂತು ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದುಃಖಿಸಿ ಗೋಳಾಡುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು